ಮಾಯಾವತಿ 
ದೇಶ

ಸಿಎಎ, ಎನ್ ಆರ್ ಸಿಯಿಂದ ದೇಶದಲ್ಲಿ ಮುಸ್ಲಿಮರ ಜೀವನ ಕಷ್ಟಕರವಾಗಿದೆ: ಮಾಯಾವತಿ

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ)ಯಿಂದಾಗಿ ದೇಶದಲ್ಲಿ ಮುಸ್ಲಿಮರ ಜೀವನ ಕಷ್ಟಕರವಾಗಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಟೀಕಿಸಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ ಸಿ)ಯಿಂದಾಗಿ ದೇಶದಲ್ಲಿ ಮುಸ್ಲಿಮರ ಜೀವನ ಕಷ್ಟಕರವಾಗಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಟೀಕಿಸಿದ್ದಾರೆ.

ದೆಹಲಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮಾಯಾವತಿ, ಕಾಂಗ್ರೆಸ್, ಬಿಜೆಪಿ ಮತ್ತು ಎಎಪಿಯ "ಆಕರ್ಷಿಸುವ ಪ್ರಣಾಳಿಕೆ"ಯ ಆಮಿಷಕ್ಕೆ ಒಳಗಾಗಬೇಡಿ ಎಂದು ರಾಷ್ಟ್ರ ರಾಜಧಾನಿ ಮತಾದರರಿಗೆ ಕರೆ ನೀಡಿದರು.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೆ, ಸರ್ವ ಜನ ಹಿತಾಯ, ಸರ್ವಜನ ಸುಖಾಯ' ಎಂಬ ತತ್ವದಡಿ ಅಭಿವೃದ್ಧಿ ಮಾಡಲಾಗುವುದು ಎಂದು ಮಾಯಾವತಿ ಹೇಳಿದ್ದಾರೆ.

ಸಿಎಎ ಮತ್ತು ಎನ್ ಆರ್ ಸಿ ವಿವಾದತ ನಂತರ ದೇಶದಲ್ಲಿ ಮುಸ್ಲಿಮರ ಜೀವನ ಮತ್ತಷ್ಟು ಕಷ್ಟಕರವಾಗಿದೆ ಎಂದು ಮಾಯಾವತಿ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT