ಸಂಗ್ರಹ ಚಿತ್ರ 
ದೇಶ

'ನನ್ನ ಪ್ರಶ್ನೆಗಳಿಗೆ ಹೆದರಬೇಡಿ, ಯುವಜನತೆಗೆ ಉತ್ತರಿಸಿ'; ನಿರ್ಮಲಾಗೆ ರಾಹುಲ್ ತಿರುಗೇಟು

ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಜನರಿಗೆ ಉದ್ಯೋಗ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಜನರಿಗೆ ಉದ್ಯೋಗ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ವಿತ್ತ ಸಚಿವರೆ, ನೀವು ನನ್ನ ಪ್ರಶ್ನೆಗಳಿಗೆ ಹೆದರಬೇಡಿ. ನಾನು ದೇಶದ ಯುವಜನತೆಯ ಪರವಾಗಿ ಪ್ರಶ್ನೆ ಕೇಳುತ್ತಿದ್ದೇನೆ. ಅವರಿಗೆ ನೀವು ಉತ್ತರದಾಯಿಯಾಗಿದ್ದೀರಿ' ಎಂದಿದ್ದಾರೆ.
'ದೇಶದ ಯುವಜನತೆಗೆ ಉದ್ಯೋಗದ ಅವಶ್ಯಕತೆಯಿದೆ ಮತ್ತು ನಿಮ್ಮ ಸರ್ಕಾರ ಅದನ್ನು ಒದಗಿಸುವಲ್ಲಿ ವಿಫಲವಾಗಿದೆ' ಎಂದು ಅವರು ಆರೋಪಿಸಿದ್ದಾರೆ. ಅಂತೆಯೇ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪ್ರತಿಕ್ರಿಯೆಯಲ್ಲಿ, ತಾವು ಒಂದು ಕೋಟಿ ಉದ್ಯೋಗ ಸೃಷ್ಟಿಯ ಸಂಖ್ಯೆ ನೀಡಿದರೂ, ಆ ಉದ್ಯೋಗಗಳು ಎಲ್ಲಿವೆ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡುತ್ತಾರೆ. ಆದ್ದರಿಂದ ನಾವು ಸಂಖ್ಯೆಗಳನ್ನು ನೀಡಿಲ್ಲ ಎಂದಿದ್ದರು.

ಈ ವರದಿಯನ್ನು ಟ್ವೀಟ್ ನಲ್ಲಿ ರಾಹುಲ್, 'ಉತ್ತರ ನೀಡಿ ಮಂತ್ರೀಜಿ' ಎಂದು ಹ್ಯಾಷ್ ಟ್ಯಾಗ್ ನೊಂದಿಗೆ ಹಂಚಿಕೊಂಡಿದ್ದಾರೆ. ಇದಕ್ಕೂ ಶನಿವಾರ ಮಂಡನೆಯಾದ ಕೇಂದ್ರ ಬಜೆಟ್ ಅನ್ನು ಅಸಂಬದ್ಧ ಹಾಗೂ ಅಸ್ಪಷ್ಟ ಎಂದು ಟೀಕಿಸಿದ್ದ ರಾಹುಲ್, ಆರ್ಥಿಕತೆ ಎದುರಿಸುತ್ತಿರುವ ಪ್ರಮುಖ ಸಮಸ್ಯೆಯೆಂದರೆ ನಿರುದ್ಯೋಗ. ಆದರೆ, ಬಜೆಟ್ ನಲ್ಲಿ ಯುವಕರಿಗೆ ಉದ್ಯೋಗ ಒದಗಿಸುವ ಯಾವುದೇ ಸಮಗ್ರ ಯೋಜನೆ ಕಾಣಿಸಲಿಲ್ಲ. ಇದು ಸರ್ಕಾರದ ಕೇವಲ ಮಾತನಾಡುವ, ಯಾವುದೇ ಕೆಲಸ ಮಾಡದ ಮನಸ್ಥಿತಿಯನ್ನು ತೋರಿಸುತ್ತದೆ. ಅದರಲ್ಲಿ ತುಂಬಾ ಪುನರಾವರ್ತನೆಗಳಿವೆ ಎಂದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT