ಸಂಗ್ರಹ ಚಿತ್ರ 
ದೇಶ

ಗುಂಡು ಹಾರಿಸುವುದನ್ನು ನಿಲ್ಲಿಸಿ: ಸಿಎಎ ವಿರುದ್ಧ ಲೋಕಸಭೆಯಲ್ಲಿ ದನಿ ಎತ್ತಿದ ವಿರೋಧ ಪಕ್ಷಗಳು

ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ. 

ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ. 

ಲೋಕಶಭೆಯಲ್ಲಿ 2020 ಬಜೆಟ್ ಅಧಿವೇಶನ ನಡೆಸುತ್ತಿದ್ದು, ಅಧಿವೇಶನದ ಪ್ರಶ್ನಾವಳಿ ಅವಧಿಯಲ್ಲಿ ವಿರೋಧ ಪಕ್ಷಗಳ ನಾಯಕರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆಂದು ವರದಿಗಳು ತಿಳಿಸಿವೆ. 

ಸಿಎಎಗೆ ಬೇಡ ಎನ್ನಿ, ಪ್ರಜಾಪ್ರಭುತ್ವವನ್ನು ಉಳಿಸಿ ಮತ್ತು ನಮ್ಮ ಸಂವಿಧಾನವನ್ನು ರಕ್ಷಿಸಿ ಎಂದು ವಿರೋಧ ಪಕ್ಷಗಳ ನಾಯಕರು ಘೋಷಣೆ ಕೂಗಿದ್ದಾರೆ. ಅಲ್ಲದೆ, ಗೋಲಿ ಮಾರ್ನಾ ಬಂದ್ ಕರೋ, ದೇಶ್ ಕೋ ತೋಡ್ನಾ ಬಂದ್ ಕರೋ (ಗುಂಡು ಹಾರಿಸುವುದನ್ನು  ನಿಲ್ಲಿಸಿ, ದೇಶ ಒಡೆಯುವುದನ್ನು ನಿಲ್ಲಿಸಿ) ಎಂದು ಘೋಷಣೆ ಕೂಗಿದ್ದಾರೆ. 

ಈ ವೇಳೆ ಮಾತನಾಡಿರುವ ಸ್ಪೀಕರ್ ಓಂ ಬಿರ್ಲಾ ಅವರು, ಯುವಕರ ಕೌಶಲ್ಯಾಭಿವೃದ್ಧಿ ಕುರಿತ ಪ್ರಮುಖ ವಿಚಾರದ ಬಗ್ಗೆ ಚರ್ಚೆ ನಡೆಯುವ ಅಗತ್ಯವಿದ್ದು, ಪ್ರತೀಯೊಬ್ಬರು ತಮ್ಮ ತಮ್ಮ ಸ್ಥಾನಗಳಲ್ಲಿ ಆಸೀನರಾಗಬೇಕೆಂದು ಮನವಿ ಮಾಡಿಕೊಂಡರು. ಅಲ್ಲದೆ, ಪ್ರಶ್ನಾವಳಿ ಅವಧಿ ಸುಸೂತ್ರವಾಗಿ ನಡೆಯುವಂತೆ ಅನುವು ಮಾಡಿಕೊಡುವಂತೆ ಕೇಳಿದರು. ಪ್ರಶ್ನಾವಳಿ ಅವಧಿ ಪೂರ್ಣಗೊಂಡ ಬಳಿಕ ಶೂನ್ಯ ಅವಧಿಯಲ್ಲಿ ಸದಸ್ಯರು ದನಿ ಎತ್ತುವ ವಿಚಾರದ ಬಗ್ಗೆಯೂ ಚರ್ಚೆ ನಡೆಸುವುದಾಗಿ ಇದೇ ವೇಳೆ ಸ್ಪೀಕರ್ ಭರವಸೆ ನೀಡಿದರು. ಆದರೂ ಇದಾವುದ್ಕಕೂ ಜಗ್ಗದ ವಿರೋಧ ಪಕ್ಷಗಳ ನಾಯಕರು ತಮ್ಮ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮುಂದುವರೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT