ಸಾಂದರ್ಭಿಕ ಚಿತ್ರ 
ದೇಶ

ಶಾಹೀನ್ ಬಾಗ್: ಚಳಿಯಿಂದ ಹಸುಗೂಸು ಮೃತಪಟ್ಟರೂ ಮತ್ತೆ ಪ್ರತಿಭಟನೆಗೆ ಮರಳಿದ ತಾಯಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೊರೆಯುವ ಚಳಿಯ ನಡುವೆಯೂ ತಾಯಿಯೊಂದಿಗೆ  ತಲೆಗೆ ತ್ರಿವಣ ಧ್ವಜ ಹೊದ್ದು ಕುಳಿತುಕೊಳ್ಳುತ್ತಿದ್ದ ನಾಲ್ಕು ತಿಂಗಳ ಹಸುಗೂಸು ಮೊಹಮ್ಮದ್ ಜಹಾನ್ ಮೃತಪಟ್ಟಿದೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೊರೆಯುವ ಚಳಿಯ ನಡುವೆಯೂ ತಾಯಿಯೊಂದಿಗೆ  ತಲೆಗೆ ತ್ರಿವಣ ಧ್ವಜ ಹೊದ್ದು ಕುಳಿತುಕೊಳ್ಳುತ್ತಿದ್ದ ನಾಲ್ಕು ತಿಂಗಳ ಹಸುಗೂಸು ಮೊಹಮ್ಮದ್ ಜಹಾನ್ ಮೃತಪಟ್ಟಿದೆ

ತೀವ್ರ ಚಳಿ ಹಾಗೂ ಶೀತದಿಂದಾಗಿ ಈ ಮಗು ಮೃತಪಟ್ಟಿದ್ದರೂ, ದೃಢ ನಿರ್ಧಾರದೊಂದಿಗೆ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿರುವ ಆ ಮಗುವಿನ ತಾಯಿ, ಇದು ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ಎನ್ನುತ್ತಾರೆ. 

ಆ ಶಿಶುವಿನ  ಪೋಷಕರಾದ  ಮೊಹಮ್ಮದ್ ಆರಿಫ್ ಮತ್ತು ನಾಜಿಯಾ, ಬಟ್ಲಾ ಹೌಸ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಶೀಟ್  ಮತ್ತು ಬಟ್ಟೆಯೊಂದಿಗೆ ಒಂದು ಸಣ್ಣ ಗುಡಿಸಲಿನಲ್ಲಿ ಇಬ್ಬರು ಮಕ್ಕಳೊಂದಿಗೆ  ವಾಸಿಸುತ್ತಿದ್ದಾರೆ 

ಇವರು ಉತ್ತರ ಪ್ರದೇಶದ ಬರೇಲಿಯಿಂದ ಬಂದಿದ್ದು,  ಅರಿಫ್ ಎಂಬ್ರಾಯಿಡರ್ ಕೆಲಸದ ಜೊತೆಗೆ  ಇ- ರಿಕ್ಷಾ ಓಡಿಸುತ್ತಾರೆ. ಆತನ ಹೆಂಡತಿ ಎಂಬ್ರಾಯಿಡರ್ ಕೆಲಸಕ್ಕೆ ನೆರವು ನೀಡುತ್ತಾರೆ. 

ಕಸೂತಿ ಕೆಲಸದ ಜೊತೆಗೆ ಇ- ರಿಕ್ಷಾವನ್ನು ಓಡಿಸಿದರೂ ಕಳೆದ ತಿಂಗಳು ನಾನು ಸಾಕಷ್ಟು ಸಂಪಾದಿಸಲು ಸಾಧ್ಯವಾಗಲಿಲ್ಲ. ಈಗ ನಮ್ಮ ಮಗುವಿನ ಸಾವಿನೊಂದಿಗೆ ಎಲ್ಲವನ್ನೂ ಕಳೆದುಕೊಂಡಿದ್ದೇನೆ ಎಂದು ಹಸುಗೂಸು ಧರಿಸುತ್ತಿದ್ದ ಐ ಲವ್ ಮೈ ಇಂಡಿಯಾ ಎಂದು ಬರೆದಿದ್ದ ಉಣ್ಣೆಯ ಕ್ಯಾಪ್  ತೋರಿಸಿ ಅರಿಫ್ ಕಣ್ಣೀರಿಡುತ್ತಾರೆ.

ಪ್ರತಿಭಟನೆಯಿಂದ ಮರಳಿದ ನಂತರ ಜನವರಿ 30ರಂದು ರಾತ್ರಿ ನಿದ್ರೆಯಲ್ಲಿರುವಾಗಲೇ ಜಹಾನ್ ನಿಧನ ಹೊಂದಿದ್ದಾಗಿ ನಾಜಿಯಾ ದು:ಖಿತರಾದರು. ನಾಜಿಯಾ ಡಿಸೆಂಬರ್ 18ರಿಂದಲೂ ಪ್ರತಿದಿನವೂ ಜಹಾನ್ ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದರು. 

ಸಿಎಎ ಹಾಗೂ ಎನ್ ಆರ್ ಸಿ ಎಲ್ಲಾ ಸಮುದಾಯಗಳ ವಿರೋಧಿಯಾಗಿದ್ದು, ಶಾಹೀನ್ ಭಾಗ್ ಪ್ರತಿಭಟನೆಯಲ್ಲಿ ಮತ್ತೆ ಪಾಲ್ಗೊಂಡಿರುವುದಾಗಿ ಹೇಳುವ ನಾಜಿಯಾ, ದೇಶದಲ್ಲಿನ ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ಈ ಹೋರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಧರ್ಮದ ಆಧಾರದ ಮೇಲೆ ವಿಭಜಿಸುವ ಸಿಎಎಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಆದರೆ, ನಮ್ಮ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುವ ಈ ಕಾಯ್ದೆ ಏಕೆ ಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಮಗುವಿನ ಸಾವಿಗೆ ಸಿಎಎ ಹಾಗೂ ಎನ್ ಆರ್ ಸಿಯೇ ಕಾರಣ ಎಂದು ಅರೀಫ್ ದೂಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT