ಪ್ರಧಾನಿ ಮೋದಿ 
ದೇಶ

ಜಾಮಿಯಾ, ಶಾಹೀನ್ ಬಾಗ್ ಪ್ರತಿಭಟನೆ ಭಾರತ ಇಬ್ಭಾಗ ಮಾಡುವ ಪಿತೂರಿ: ಪ್ರಧಾನಿ ಮೋದಿ

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಜಾಮಿಯಾ ಹಾಗೂ ಸಾಹೀನ್ ಬಾಗ್ ಪ್ರತಿಭಟನೆ ಸೇರಿದಂತೆ....

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಜಾಮಿಯಾ ಹಾಗೂ ಸಾಹೀನ್ ಬಾಗ್ ಪ್ರತಿಭಟನೆ ಸೇರಿದಂತೆ ಈ ಎಲ್ಲಾ ಪ್ರತಿಭಟನೆಗಳ ಹಿಂದೆ ವಿರುದ್ಧ ರಾಜಕೀಯ ಪಿತೂರಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದಾರೆ.

ಇಂದು ದೆಹಲಿಯಲ್ಲಿ ಮೊದಲ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಅರಾಜಕತೆಯಿಂದ ಕೂಡಿದ್ದು, ಇದು ಕಾಂಗ್ರೆಸ್​ ಮತ್ತು ಆಪ್​ ಪಕ್ಷಗಳ ಪ್ರಚೋದನೆಯಿಂದ ನಡೆಯುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಸಿಎಎ ವಿರುದ್ಧ ಜಾಮಿಯಾ, ಶಾಹಿನ್ಬಾಗ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಆಕಸ್ಮಿಕವೇ ಎಂದು ಪ್ರಶ್ನಿಸಿದ ಪ್ರಧಾನಿ, ಸೀಲಂಪುರ್​, ಜಾಮಿಯಾ, ಶಾಹೀನ್​ಬಾಗ್​​ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ರಾಜಕೀಯ ಪ್ರೇರಿತ. ದೇಶದ ಸಾಮರಸ್ಯವನ್ನು ಹಾಳುಗೆಡುವಿ, ಇಬ್ಬಾಗ ಮಾಡುವ ಪಿತೂರಿ ಎಂದು ದೂರಿದರು.

ಆಧುನಿಕ ಮತ್ತು ಸುರಕ್ಷಿತ ದೆಹಲಿ ಬೇಕೆಂದರೆ ಬಿಜೆಪಿಗೆ ಮತಹಾಕಬೇಕು. ನಾವು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ. ದೆಹಲಿ ಜನರಿಗೆ ಏನು ಬೇಕು ಎಂಬುದನ್ನು ನಾನು ಕೇಳುವುದಿಲ್ಲ. ಕಾರಣ ಇದರ ಬಗ್ಗೆ ನನಗೆ ಸಂಪೂರ್ಣ ಚಿತ್ರಣವಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಶಕ್ತಿ ತುಂಬಿದ್ದಾರೆ. ಅವರ ಮತಗಳು ಭವಿಷ್ಯವನ್ನು ಬದಲಾಯಿಸಲು ನಮಗೆ ಸಹಕಾರ ನೀಡುತ್ತದೆ ಎಂದರು.

ನಮ್ಮದೇ ಆದ ಮನೆಹೊಂದಬೇಕು ಎಂಬುದು ಪ್ರತಿಯೊಬ್ಬರ ಕನಸು. ಕೇಂದ್ರ ಸರ್ಕಾರ ದೇಶದಲ್ಲಿ ಎರಡು ಕೋಟಿ ಮನೆ ನಿರ್ಮಾಣ ಮಾಡಿದೆ, ಆದರೆ ದೆಹಲಿಯಲ್ಲಿ ಒಂದೂ ಮನೆ ನಿರ್ಮಾಣವಾಗಿಲ್ಲ. ಆಪ್​ ಸರ್ಕಾರ ಇಂತಹ ಯೋಜನೆಗೆ ಅಡ್ಡಗಾಲಾಗಿ ನಿಂತಿದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT