ಭೂ ಕಬಳಿಸಿ ದರ್ಪ ತೋರಿದ ಮುಖಂಡ: ಪ್ರತಿಭಟಿಸಿದ್ದಕ್ಕೆ ಶಿಕ್ಷಕಿ ಕೈಕಾಲು ಕಟ್ಟಿ ಅಮಾನವೀಯ ಮೆರೆದ ಟಿಎಂಸಿ ಕಾರ್ಯಕರ್ತರು 
ದೇಶ

ಭೂ ಕಬಳಿಸಿ ದರ್ಪ ತೋರಿದ ಮುಖಂಡ: ಪ್ರತಿಭಟಿಸಿದ್ದಕ್ಕೆ ಶಿಕ್ಷಕಿ ಕೈಕಾಲು ಕಟ್ಟಿ ಅಮಾನವೀಯ ಮೆರೆದ ಟಿಎಂಸಿ ಕಾರ್ಯಕರ್ತರು

ರಸ್ತೆ ನಿರ್ಮಾಣಕ್ಕಾಗಿ ಭೂಮಿ ಕಬಳಿಸಿದ್ದೂ ಅಲ್ಲದೆ, ವಿರೋಧ ವ್ಯಕ್ತಪಡಿಸಿದ್ದೆ ಶಿಕ್ಷಕಿಯೊಬ್ಬರ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ, ರಸ್ತೆಯ ಮೇಲೆ ಎಳೆದೊಯ್ದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ್ ನ ಗಂಗ್ರಾಮ್ ಪುರ್ ಎಂಬಲ್ಲಿ ನಡೆದಿದೆ. 

ಕೋಲ್ಕತಾ: ರಸ್ತೆ ನಿರ್ಮಾಣಕ್ಕಾಗಿ ಭೂಮಿ ಕಬಳಿಸಿದ್ದೂ ಅಲ್ಲದೆ, ವಿರೋಧ ವ್ಯಕ್ತಪಡಿಸಿದ್ದೆ ಶಿಕ್ಷಕಿಯೊಬ್ಬರ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ, ರಸ್ತೆಯ ಮೇಲೆ ಎಳೆದೊಯ್ದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ್ ನ ಗಂಗ್ರಾಮ್ ಪುರ್ ಎಂಬಲ್ಲಿ ನಡೆದಿದೆ. 

ಸ್ಥಳೀಯ ಪಂಚಾಯತ್ ನ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡ ಸೇರಿದಂತೆ ಕೆಲ ಟಿಎಂಸಿ ಕಾರ್ಯಕರ್ತರು ಶಿಕ್ಷಕಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತ್ತಿದೆ. 

ಶಿಕ್ಷಕಿಗೆ ಸೇರಿದ್ದ ಭೂಮಿಯನ್ನು ಬಲವಂತವಾಗಿ ಆಕ್ರಮಣ ಮಾಡಿ ರಸ್ತೆ ನಿರ್ಮಿಸಲು ಪಂಚಾಯತ್ ಮುಖಂಡರು ಮುಂದಾಗಿದ್ದರು. ಇದರ ವಿರುದ್ಧ ಶಿಕ್ಷಕಿ ಪ್ರತಿಭಟಿಸಿದ್ದರು. ಇದಕ್ಕೆ ಆಕ್ರೋಶಗೊಂಡ ಮುಖಂಡ ಹಾಗೂ ಆತನ ಬೆಂಬಲಿಗರು, ಶಿಕ್ಷಕಿಯ ಕೈಕಾಲುಗಳನ್ನು ಕಟ್ಟಿ ರಸ್ತೆಯ ಮೇಲೆ ಎಳೆದೊಯ್ದಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪಂಚಾಯತ್ ಮುಖಂಡನನ್ನು ತೃಣಮೂಲ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರ್ಪಿತಾ ಘೋಷ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 

ಘಟನೆ ವೇಳೆ ಶಿಕ್ಷಕಿಯ ರಕ್ಷಣೆಗೆ ಧಾವಿಸಿದ್ದ ತಾಯಿ ಹಾಗೂ ಸಹೋದರಿಗೂ ಟಿಎಂಸಿ ಕಾರ್ಯಕರ್ತರು ಥಳಿಸಿದ್ದಾರೆಂದು ಹೇಳಲಾಗುತ್ತಿದೆ. 

ರಸ್ತೆ ನಿರ್ಮಾಣ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ ಮನೆ ಮುಂಭಾಗದಲ್ಲಿ 12 ಅಡಿ ಜಾಗ ನೀಡಲಾಗಿತ್ತು. ಆದರೆ, ಪಂಚಾಯತ್ ಮುಖಂಡರು ಹಾಗೂ ಸದಸ್ಯರು ನಮಗೆ ಮಾಹಿತಿ ನೀಡದೆಯೇ, ಯಾವುದೇ ಪರಿಹಾರವನ್ನೂ ನೀಡದೆಯೇ ರಸ್ತೆಗೆ 24 ಅಡಿ ಜಾಗ ಕಬಳಿಕೆ ಮಾಡಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ನಮ್ಮ ಬಹುತೇಕ ಜಾಗ ನಾಶಗೊಳ್ಳುತ್ತದೆ. ನಮಗೆ ನಷ್ಟವಾಗುತ್ತದೆ ಎಂದು ಶಿಕ್ಷಕಿ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. 

ಘಟನೆ ಬಳಿಕ ಗ್ರಾಮಸ್ಥರು ಶಿಕ್ಷಕಿ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಎಲ್ಲರೂ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT