ಭೂ ಕಬಳಿಸಿ ದರ್ಪ ತೋರಿದ ಮುಖಂಡ: ಪ್ರತಿಭಟಿಸಿದ್ದಕ್ಕೆ ಶಿಕ್ಷಕಿ ಕೈಕಾಲು ಕಟ್ಟಿ ಅಮಾನವೀಯ ಮೆರೆದ ಟಿಎಂಸಿ ಕಾರ್ಯಕರ್ತರು 
ದೇಶ

ಭೂ ಕಬಳಿಸಿ ದರ್ಪ ತೋರಿದ ಮುಖಂಡ: ಪ್ರತಿಭಟಿಸಿದ್ದಕ್ಕೆ ಶಿಕ್ಷಕಿ ಕೈಕಾಲು ಕಟ್ಟಿ ಅಮಾನವೀಯ ಮೆರೆದ ಟಿಎಂಸಿ ಕಾರ್ಯಕರ್ತರು

ರಸ್ತೆ ನಿರ್ಮಾಣಕ್ಕಾಗಿ ಭೂಮಿ ಕಬಳಿಸಿದ್ದೂ ಅಲ್ಲದೆ, ವಿರೋಧ ವ್ಯಕ್ತಪಡಿಸಿದ್ದೆ ಶಿಕ್ಷಕಿಯೊಬ್ಬರ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ, ರಸ್ತೆಯ ಮೇಲೆ ಎಳೆದೊಯ್ದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ್ ನ ಗಂಗ್ರಾಮ್ ಪುರ್ ಎಂಬಲ್ಲಿ ನಡೆದಿದೆ. 

ಕೋಲ್ಕತಾ: ರಸ್ತೆ ನಿರ್ಮಾಣಕ್ಕಾಗಿ ಭೂಮಿ ಕಬಳಿಸಿದ್ದೂ ಅಲ್ಲದೆ, ವಿರೋಧ ವ್ಯಕ್ತಪಡಿಸಿದ್ದೆ ಶಿಕ್ಷಕಿಯೊಬ್ಬರ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ, ರಸ್ತೆಯ ಮೇಲೆ ಎಳೆದೊಯ್ದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ್ ನ ಗಂಗ್ರಾಮ್ ಪುರ್ ಎಂಬಲ್ಲಿ ನಡೆದಿದೆ. 

ಸ್ಥಳೀಯ ಪಂಚಾಯತ್ ನ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡ ಸೇರಿದಂತೆ ಕೆಲ ಟಿಎಂಸಿ ಕಾರ್ಯಕರ್ತರು ಶಿಕ್ಷಕಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತ್ತಿದೆ. 

ಶಿಕ್ಷಕಿಗೆ ಸೇರಿದ್ದ ಭೂಮಿಯನ್ನು ಬಲವಂತವಾಗಿ ಆಕ್ರಮಣ ಮಾಡಿ ರಸ್ತೆ ನಿರ್ಮಿಸಲು ಪಂಚಾಯತ್ ಮುಖಂಡರು ಮುಂದಾಗಿದ್ದರು. ಇದರ ವಿರುದ್ಧ ಶಿಕ್ಷಕಿ ಪ್ರತಿಭಟಿಸಿದ್ದರು. ಇದಕ್ಕೆ ಆಕ್ರೋಶಗೊಂಡ ಮುಖಂಡ ಹಾಗೂ ಆತನ ಬೆಂಬಲಿಗರು, ಶಿಕ್ಷಕಿಯ ಕೈಕಾಲುಗಳನ್ನು ಕಟ್ಟಿ ರಸ್ತೆಯ ಮೇಲೆ ಎಳೆದೊಯ್ದಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪಂಚಾಯತ್ ಮುಖಂಡನನ್ನು ತೃಣಮೂಲ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರ್ಪಿತಾ ಘೋಷ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 

ಘಟನೆ ವೇಳೆ ಶಿಕ್ಷಕಿಯ ರಕ್ಷಣೆಗೆ ಧಾವಿಸಿದ್ದ ತಾಯಿ ಹಾಗೂ ಸಹೋದರಿಗೂ ಟಿಎಂಸಿ ಕಾರ್ಯಕರ್ತರು ಥಳಿಸಿದ್ದಾರೆಂದು ಹೇಳಲಾಗುತ್ತಿದೆ. 

ರಸ್ತೆ ನಿರ್ಮಾಣ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ ಮನೆ ಮುಂಭಾಗದಲ್ಲಿ 12 ಅಡಿ ಜಾಗ ನೀಡಲಾಗಿತ್ತು. ಆದರೆ, ಪಂಚಾಯತ್ ಮುಖಂಡರು ಹಾಗೂ ಸದಸ್ಯರು ನಮಗೆ ಮಾಹಿತಿ ನೀಡದೆಯೇ, ಯಾವುದೇ ಪರಿಹಾರವನ್ನೂ ನೀಡದೆಯೇ ರಸ್ತೆಗೆ 24 ಅಡಿ ಜಾಗ ಕಬಳಿಕೆ ಮಾಡಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ನಮ್ಮ ಬಹುತೇಕ ಜಾಗ ನಾಶಗೊಳ್ಳುತ್ತದೆ. ನಮಗೆ ನಷ್ಟವಾಗುತ್ತದೆ ಎಂದು ಶಿಕ್ಷಕಿ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. 

ಘಟನೆ ಬಳಿಕ ಗ್ರಾಮಸ್ಥರು ಶಿಕ್ಷಕಿ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಎಲ್ಲರೂ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT