ಬಿಜೆಪಿ ಸಂಸದೀಯ ಪಕ್ಷ ಸಭೆ 
ದೇಶ

ಬಿಜೆಪಿ ಸಂಸದೀಯ ಪಕ್ಷ ಸಭೆ ಪ್ರಗತಿಯಲ್ಲಿ, ಪ್ರಧಾನಿ ಸೇರಿ ಬಿಜೆಪಿ ನಾಯಕರು ಭಾಗಿ 

ಭಾರತೀಯ ಜನತಾ ಪಾರ್ಟಿಯ ಸಂಸದೀಯ ಪಕ್ಷದ ಸಭೆ ಸಂಸತ್ತು ಭವನದಲ್ಲಿ ಮುಂದುವರಿದಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ನಿತಿನ್ ಗಡ್ಕರಿ, ರವಿಶಂಕರ ಪ್ರಸಾದ್, ಪ್ರಕಾಶ್ ಜಾವದೇಕರ್, ರಮೇಶ್ ಪೊಕ್ರಿಯಾ, ನಿರ್ಮಲಾ ಸೀತಾರಾಮನ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದಾರೆ.

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಪಕ್ಷದ ಸಭೆ ಸಂಸತ್ತು ಭವನದಲ್ಲಿ ಮುಂದುವರಿದಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ನಿತಿನ್ ಗಡ್ಕರಿ, ರವಿಶಂಕರ ಪ್ರಸಾದ್, ಪ್ರಕಾಶ್ ಜಾವದೇಕರ್, ರಮೇಶ್ ಪೊಕ್ರಿಯಾ, ನಿರ್ಮಲಾ ಸೀತಾರಾಮನ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದಾರೆ.


ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ ಪಿ ನಡ್ಡಾ ಅವರು ಅಧಿಕಾರ ವಹಿಸಿಕೊಂಡ ನಂತರ ನಡೆಯುತ್ತಿರುವ ಸಭೆ ಇದಾಗಿದೆ. ಸಂಸದ ಅನಂತ್ ಕುಮಾರ್ ಹೆಗಡೆಯವರು ಮಹಾತ್ಮಾ ಗಾಂಧೀಜಿ ಬಗ್ಗೆ ಹೇಳಿಕೆ ನೀಡಿ ಅದು ತೀವ್ರ ವಿವಾದವುಂಟಾಗಿ ಬಿಜೆಪಿ ನಾಯಕರು ಅವರಲ್ಲಿ ಷರತ್ತುರಹಿತ ಕ್ಷಮೆ ಕೇಳಿ ಎಂದು ನೊಟೀಸ್ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. 


ಇಂದಿನ ಬಿಜೆಪಿ ಸಂಸದೀಯ ಸಭೆಯಲ್ಲಿ ಈ ಬಗ್ಗೆ ನಾಯಕರು ಏನು ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ಕುತೂಹಲವಿದೆ. 


ಈ ಮಧ್ಯೆ ಇಂದಿನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಂಸದ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲು ನಾವಿಲ್ಲಿಗೆ ಬಂದಿದ್ದೇವೆ. ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!