ನಿರ್ಭಯಾ ಹಂತಕರು 
ದೇಶ

ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಜಾರಿ: ಬುಧವಾರ ಕಾದಿಟ್ಟ ತೀರ್ಪು ಪ್ರಕಟ

ನಿರ್ಭಯಾ ಅತ್ಯಾಚಾರ,  ಹತ್ಯೆ ಪ್ರಕರಣದ ನಾಲ್ವರು ಆಪರಾಧಿಗಳಿಗೆ  ವಿಧಿಸಲಾಗಿರುವ ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿಟ್ಟ ತೀರ್ಪು  ಪ್ರಕಟಿಸಲಿದೆ

ನವದೆಹಲಿ: ನಿರ್ಭಯಾ ಅತ್ಯಾಚಾರ,  ಹತ್ಯೆ ಪ್ರಕರಣದ ನಾಲ್ವರು ಆಪರಾಧಿಗಳಿಗೆ  ವಿಧಿಸಲಾಗಿರುವ ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿಟ್ಟ ತೀರ್ಪು  ಪ್ರಕಟಿಸಲಿದೆ

ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಕುರಿತು ಶನಿವಾರ ಮತ್ತು ಭಾನುವಾರ ವಿಶೇಷ ವಿಚಾರಣೆ ನಡೆಸಿದ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟ್ ಫೆಬ್ರವರಿ 2 ರಂದು ತೀರ್ಪು ಕಾಯ್ದಿರಿಸಿದ್ದರು. 

ತಿಹಾರ್ ಜೈಲಿನಲ್ಲಿರುವ ಮುಕೇಶ್  ಕುಮಾರ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಅಕ್ಷಯ್ ಕುಮಾರ್ ಅವರನ್ನು ಫೆಬ್ರವರಿ 1 ರಂದು ಗಲ್ಲಿಗೇರಿಸಲು ಹೊರಡಿಸಲಾಗಿದ್ದ ಡೆತ್ ವಾರೆಂಟ್ ಗೆ ದೆಹಲಿ ನ್ಯಾಯಾಲಯ  ಜ.31 ರಂದು ತಾತ್ಕಾಲಿಕ ತಡೆ ನೀಡಿದ್ದನ್ನು ಕೇಂದ್ರ ಸರ್ಕಾರ ಹೈಕೋರ್ಟ್ ನಲ್ಲಿ ಪ್ರಶ್ನಿಸಿತು. 

ಈ ಪ್ರಕರಣದಲ್ಲಿ ಅಪರಾಧಿಯೊಬ್ಬನ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳ ವಿಚಾರಣೆ ಮುಂದೆ ಬಾಕಿ ಇರುವಾಗ ನಾಲ್ವರನ್ನೂ ಒಟ್ಟಿಗೆ ನೇಣಿಗೇರಿಸಲು ಸಾಧ್ಯವಿಲ್ಲ ಎಂಬ ನಿಯಮಗಳ ಅನುಸಾರ ಪಟಿಯಾಲ ಹೌಸ್ ಕೋರ್ಟ್ ಗಲ್ಲಿಗೇರಿಸಲು ತಾತ್ಕಾಲಿಕ ತಡೆ ನೀಡಿತ್ತು.

ಅಪರಾಧಿಗಳು ನೇಣು ಜಾರಿ ವಿಳಂಬಗೊಳಿಸಲು ತಂತ್ರ ನಡೆಸುತ್ತಿದ್ದಾರೆಂದು ಹೇಳಿ ಕೇಂದ್ರ ತಡೆಯಾಜ್ಞೆ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್‌ ಮೊರೆ ಹೋಗಿತ್ತು. ಮಂಗಳವಾರ ನಿರ್ಭಯಾ ಪೋಷಕರ ಪರ ವಕೀಲರು ಕೇಂದ್ರದ ಅರ್ಜಿ ಸಂಬಂಧ ತ್ವರಿತಗತಿಯಲ್ಲಿ ತೀರ್ಪು ಪ್ರಕಟಿಸಬೇಕೆಂದು ಕೋರ್ಟ್‌ನಲ್ಲಿ ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT