ಬಿಜೆಪಿ ಸಂಸದ ಪರ್ವೇಶ್ ವರ್ಮಾ 
ದೇಶ

ವಾರದಲ್ಲಿ ಎರಡನೇ ಬಾರಿ, ಬಿಜೆಪಿ ಸಂಸದ ಪರ್ವೇಶ್ ವರ್ಮಾ 24 ಗಂಟೆ ಪ್ರಚಾರ ಮಾಡದಂತೆ  ಆಯೋಗ ನಿರ್ಬಂಧ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಯೋತ್ಪಾದಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪರ್ವೇಶ್ ವರ್ಮಾ 24 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ ವಿಧಿಸಿದೆ. 

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಯೋತ್ಪಾದಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪರ್ವೇಶ್ ವರ್ಮಾ 24 ಗಂಟೆ ಚುನಾವಣಾ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ ವಿಧಿಸಿದೆ. 

ಈ ವಾರದಲ್ಲಿ ವರ್ಮಾ ಎರಡನೇ ಬಾರಿ ಆಯೋಗದಿಂದ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಈ ನಿರ್ಬಂಧ ಜಾರಿಯಾಗಿದೆ. ಇದರಿಂದಾಗಿ ವರ್ಮಾ ಫೆಬ್ರವರಿ 8 ರವರೆಗೂ ಚುನಾವಣಾ ಪ್ರಚಾರ ನಡೆಸುವಂತಿಲ್ಲ. ಆದರೆ, ಗುರುವಾರ ಸಂಜೆಯೇ  ಪ್ರಚಾರ ಅಂತ್ಯಗೊಳ್ಳಲಿದೆ

ಇದಕ್ಕೂ ಮುನ್ನ ಶಾಹೀನ್ ಬಾಗ್ ನಲ್ಲಿ ಗುಂಡಿನ ದಾಳಿ ನಡೆಸಿದ  ಕಪಿಲ್ ಗುಜ್ಜಾರ್ ಗೆ ಎಎಪಿಯೊಂದಿಗೆ ನಂಟಿದೆ ಎಂದು ಆರೋಪಿಸಿ ವರ್ಮಾ ಸಂಸತ್ತಿನ ಗಾಂಧಿ ಪ್ರತಿಭೆ ಬಳಿ ಪ್ರತಿಭಟನೆ ನಡೆಸಿದರು. 

ಗುಜ್ಜಾರ್ ಹಾಗೂ ಆತನ ತಂದೆ ಎಎಪಿ ಮುಖಂಡರೊಂದಿಗೆ ಪೋಟೋ ತೆಗೆಸಿಕೊಂಡಿರುವುದನ್ನು ಆತನ ಮೊಬೈಲ್ ನಿಂದ ದೆಹಲಿ ಪೊಲೀಸರು ವಶಪಡಿಸಿಕೊಂಡ ಮಾರನೇ ದಿನವೇ ವರ್ಮಾ ಪ್ರತಿಭಟನೆ ನಡೆಸಿದ್ದಾರೆ. 

ಶಾಹೀನ್ ಬಾಗ್ ನಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ದೆಹಲಿ ಜನರು ಯೋಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ನಿಮ್ಮ ಮನೆಗೆ ನುಗ್ಗಿ ಸಹೋದರಿಯರು,  ಹೆಣ್ಣು ಮಕ್ಕಳನ್ನು ಕೊಲ್ಲುತ್ತಾರೆ. ಅಂತಹ ಪರಿಸ್ಥಿತಿ ಈಗ ಇದೆ. ನಾಳೆ ನಿಮ್ಮನ್ನು ಕಾಪಾಡಲು ಮೋದಿ, ಅಮಿತ್ ಶಾ ಬರಲ್ಲ ಎಂದು ಪಶ್ಚಿಮ ದೆಹಲಿ ಸಂಸದ ಆಗಿರುವ ಪರ್ವೇಶ್ ವರ್ಮಾ ಹೇಳಿಕೆ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT