ಯೋಗಿ ಆದಿತ್ಯನಾಥ 
ದೇಶ

ಅಯೋಧ್ಯೆಯಿಂದ 20 ಕಿ.ಮೀ ದೂರದಲ್ಲಿ ಮಸೀದಿಗೆ 5 ಎಕರೆ ಜಾಗ ನೀಡಿದ ಯೋಗಿ ಸರ್ಕಾರ

ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ರಚನೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಅಯೋಧ್ಯೆಯಿಂದ 20 ಕಿ.ಮೀ. ದೂರದಲ್ಲಿ ಮಸೀದಿ ನಿರ್ಮಿಸುವುದಕ್ಕಾಗಿ 5 ಎಕರೆ ಜಮೀನು ಹಂಚಿಕೆ ಮಾಡಿದೆ.

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ರಚನೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಅಯೋಧ್ಯೆಯಿಂದ 20 ಕಿ.ಮೀ. ದೂರದಲ್ಲಿ ಮಸೀದಿ ನಿರ್ಮಿಸುವುದಕ್ಕಾಗಿ 5 ಎಕರೆ ಜಮೀನು ಹಂಚಿಕೆ ಮಾಡಿದೆ.

ಸುಪ್ರೀಂ ಕೋರ್ಟ್​ ನಿರ್ದೇಶನಾನುಸಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು 5 ಎಕರೆ ಜಮೀನನ್ನು ಸುನ್ನಿ ಸೆಂಟ್ರಲ್​ ವಕ್ಫ್​ ಬೋರ್ಡ್ ಗೆ ನೀಡುವ ಪ್ರಸ್ತಾವನೆಗೆ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ.

ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ನಿರ್ದೇಶಿಸಿದಂತೆ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಗೆ ಸಮೀಪ ಗುರುತಿಸಿದ 5 ಎಕರೆ ಜಮೀನನ್ನು ಬುಧವಾರ ಸುನ್ನಿ ವಕ್ಫ್​ ಬೋರ್ಡ್​ಗೆ ಕೊಡಲು ತೀರ್ಮಾನಿಸಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಇನ್ನು ಉತ್ತರ ಪ್ರದೇಶ ಸರ್ಕಾರ ನೀಡುತ್ತಿರುವ 5 ಎಕರೆ ಜಮೀನು ಸ್ವೀಕರಿಸದಂತೆ ಆಲ್​ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಸುನ್ನಿ ಸೆಂಟ್ರಲ್​ ವಕ್ಫ್​ ಬೋರ್ಡ್ ಗೆ ಒತ್ತಾಯಿಸಿದೆ.

ಒಂದು ವೇಳೆ ಉತ್ತರ ಪ್ರದೇಶ ಸರ್ಕಾರ ನೀಡುತ್ತಿರುವ 5 ಎಕರೆ ಜಮೀನನ್ನು ಸುನ್ನಿ ಸೆಂಟ್ರಲ್​ ವಕ್ಫ್​ ಬೋರ್ಡ್ ಸ್ವೀಕರಿಸಿದರೆ, ಅದು ದೇಶದ ಎಲ್ಲ ಮುಸಲ್ಮಾನರ ನಿರ್ಣಯವಾಗಲಾರದು ಎಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಹೇಳಿದೆ.  ಅಲ್ಲದೆ, ತಾನು ಮತ್ತು ತನ್ನ ಒಡನಾಡಿ ಸಂಸ್ಥೆ, ಸಂಘಟನೆಗಳು ಅಯೋಧ್ಯೆಯಲ್ಲಿ ಜಮೀನು ಸ್ವೀಕರಿಸಬಾರದು ಎಂಬ ನಿರ್ಣಯಕ್ಕೆ ಬಂದಿದ್ದೇವೆ ಎಂದು ಎಐಎಂಪಿಎಲ್​ಬಿಯ ಹಿರಿಯ ಕಾರ್ಯಕಾರಿ ಸದಸ್ಯ ಮೌಲಾನಾ ಯಾಸಿನ್ ಉಸ್ಮಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT