ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ 
ದೇಶ

ಜಮ್ಮು-ಕಾಶ್ಮೀರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಮೆಹಬೂಬಾ, ಒಮರ್ ಅಬ್ದುಲ್ಲಾ ವಿರುದ್ಧ ಪ್ರಕರಣ ದಾಖಲು

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಹಾಗೂ ನ್ಯಾಷನಲ್ ಕಾನ್ಫರೆನ್ಸ್ , ಪಿಡಿಪಿಯ ಇತರ ಇಬ್ಬರು ರಾಜಕಾರಣಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಹಾಗೂ ಒಮರ್ ಅಬ್ದುಲ್ಲಾ ಹಾಗೂ ನ್ಯಾಷನಲ್ ಕಾನ್ಫರೆನ್ಸ್ , ಪಿಡಿಪಿಯ ಇತರ ಇಬ್ಬರು ರಾಜಕಾರಣಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಫ್ತಿ ಬಂಧನದಲ್ಲಿರುವ ಬಂಗಲೆಗೆ ಆದೇಶವನ್ನು ಪೊಲೀಸರೊಂದಿಗೆ ಮ್ಯಾಜಿಸ್ಟ್ರೇಟ್ ವೊಬ್ಬರು ಆದೇಶ ಕಳುಹಿಸಿದ್ದಾರೆ. ಅಬ್ದುಲ್ಲಾ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ  ಅವರು ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪ್ರಧಾನ ಕಾರ್ಯದರ್ಶಿ ಆಲಿ ಮೊಹಮ್ಮದ್ ಸಾಗರ್ ಅವರಿಗೂ ನೋಟಿಸ್ ಕಳುಹಿಸಲಾಗಿದೆ. ಇದೇ ರೀತಿಯಲ್ಲಿ ಪಿಡಿಪಿ ಮುಖಂಡರಾದ ಸರ್ತಾಜ್ ಮಾದಾನಿ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.  ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ 2019 ಆಗಸ್ಟ್ 5 ರಿಂದಲೂ ಸಾಗರ್ ಹಾಗೂ ಮಾದಾನಿ ಗೃಹ ಬಂಧನದಲ್ಲಿದ್ದರು. ಅವರ ಆರು ತಿಂಗಳ ಕಸ್ಟಡಿ ಗುರುವಾರ ಕೊನೆಗೊಂಡಿತು

ಇದಕ್ಕೂ ಮುಂಚೆ ಮಾಜಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಹ್ನದ್ ವೀರಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ, ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT