ವಿಶ್ವ ಹಿಂದೂ ಮಹಾಸಭಾ ಅಧ್ಯಕ್ಷನ ಹತ್ಯೆ 
ದೇಶ

ವಿಶ್ವ ಹಿಂದೂ ಮಹಾಸಭಾ ಅಧ್ಯಕ್ಷನ ಹತ್ಯೆ ಪ್ರಕರಣ,  2ನೇ ಪತ್ನಿ ಸೇರಿ ಮೂವರ ಬಂಧನ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ವಿಶ್ವ ಹಿಂದೂ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ರಂಜೀತ್ ಬಚ್ಚನ್ ಹತ್ಯೆ ಪ್ರಕರಣವನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಕೊಲೆಗೀಡಾದ ರಂಜೀತ್ ಬಚ್ಚನ್ ನ   ಎರಡನೆಯ ಪತ್ನಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಲಖನೌ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ವಿಶ್ವ ಹಿಂದೂ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ರಂಜೀತ್ ಬಚ್ಚನ್ ಹತ್ಯೆ ಪ್ರಕರಣವನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಕೊಲೆಗೀಡಾದ ರಂಜೀತ್ ಬಚ್ಚನ್ ನ   ಎರಡನೆಯ ಪತ್ನಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ವಿಶ್ವ ಹಿಂದೂ ಮಹಾಸಭಾ ಸಂಸ್ಥಾಪಕ ಬಚ್ಚನ್ (40 ವರ್ಷ) ಎಂಬುವರನ್ನು ಲಖನೌದ ಅತಿ ಭದ್ರತಾ ವಲಯವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಸಂಕೀರ್ಣದ ಬಳಿ ಫೆಬ್ರವರಿ 2 ರಂದು ಬೆಳಗಿನ ವಾಯು ವಿಹಾರ ನಡೆಸುತ್ತಿದ್ದಾಗ ಗುಂಡು ಹಾರಿಸಿ ಹತ್ಯೆ ಮಾಡಿ, ಜೊತೆಗಿದ್ದ ಆತನ ಸೋದರ ಸಂಬಂಧಿ ಅದಿತ್ಯಾ ಶ್ರೀವಾಸ್ತವ ಮೇಲೂ ಗುಂಡು ಹಾರಿಸಿ ಗಾಯಗೊಳಿಸಲಾಗಿತ್ತು.

ಬಚ್ಚನ್ ಹಾಗೂ ಆತನ ಎರಡನೇ ಪತ್ನಿ ಶ್ರೀಮತಿ ಶ್ರೀವಾಸ್ತವ ನಡುವಣ ದಾಂಪತ್ಯ ಕಲಹದಿಂದ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಇಲಾಖೆಯಲ್ಲಿ ಕ್ಲರ್ಕ್ ಆಗಿರುವ ಶ್ರೀಮತಿಗೆ ನಾಲ್ಕು ವರ್ಷದ ಮಗುವಿದ್ದು, ಕಳೆದ ಮೂರು ವರ್ಷಗಳಿಂದ ಬಚ್ಚನ್ ನಿಂದ ಪ್ರತ್ಯೇಕಗೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಮತಿ ಶ್ರೀವಾಸ್ತವ, ದೀಪೇಂದ್ರ ಎಂಬುವನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅವರಿಬ್ಬರು   ಮದುವೆ  ಮಾಡಿಕೊಳ್ಳಲು ಬಯಸಿದ್ದರು. 

ಪೊಲೀಸರ ಪ್ರಕಾರ ಬಚ್ಚನ್ ಹಲವು ವರ್ಷಗಳ ಹಿಂದೆಯೇ ವಿವಾಹವಾಗಿದ್ದು, ಹಲವು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾನೆ. ಈ ವಿಷಯವನ್ನು ಮರೆ ಮಾಚಿ 2015 ಜನವರಿ 15 ರಂದು ಶ್ರೀಮತಿ ಶ್ರೀವಾಸ್ತವ ಅವರನ್ನು ವಿವಾಹವಾಗಿದ್ದ, ಸತ್ಯಾಂಶ ಗೊತ್ತಾದ ನಂತರ ಎರಡನೇ ಪತ್ನಿ ಬಚ್ಚನ್ ನನ್ನು ತೊರೆದು ಪ್ರತ್ಯೇಕವಾಗಿ ವಾಸವಾಗಿದ್ದಳು. ಆದರೆ, ಜನವರಿ 17ರಂದು ಎರಡನೆ ಪತ್ನಿಯ ಮನೆಗೆ ಭೇಟಿ ನೀಡಿದ್ದ ಬಚ್ಚನ್, ಜನವರಿ  18 ರಂದು ವಿವಾಹ ದಿನೋತ್ಸವ ಆಚರಿಸಿಕೊಳ್ಳೊಣ ಎಂದು ಒತ್ತಾಯಿಸಿದ್ದ. ಆದರೆ, ಆಕೆ ನಿರಾಕರಿಸಿದ್ದಳು. ಇದರಿಂದ ಕುಪಿತಗೊಂಡಿದ್ದ ಬಚ್ಚನ್ ಆಕೆಯ ಮೇಲೆ ಹಲ್ಲೆ ನಡೆಸಿದ್ದ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಹಲ್ಲೆಯನಂತರ ಶ್ರೀ ವಾಸ್ತವ ಹಾಗೂ ದಿಪೇಂದ್ರ ಕುಮಾರ್ ಬಚ್ಚನ್ ಹತ್ಯೆಗೆ ಸಂಚು ರೂಪಿಸಿದ್ದರು. ಕುಮಾರ್ ವಾಹನ ಚಾಲಕ ಸಂಜೀತ್ ಗೌತಮ್ ಹಾಗೂ ಸೋದರ ಸಂಬಂಧಿ ಜಿತೇಂದ್ರ ಅವರಿಗೆ ತರಬೇತಿ ನೀಡಿ ಫೆಬ್ರವರಿ  2 ರಂದು   ಗುಂಡು ಹಾರಿಸಿ ಹತ್ಯೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT