ವಿದೇಶಾಂಗ ಸಚಿವ ಎಸ್. ಜೈಶಂಕರ್ 
ದೇಶ

ಪಾಕಿಸ್ತಾನ ನಾಗರೀಕರನ್ನು ಸ್ಥಳಾಂತರಿಸಲು ಭಾರತ ಸಿದ್ದ.!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ  ಸರ್ಕಾರ  ಮಹತ್ವದ  ನಿರ್ಧಾರ ಕೈಗೊಂಡಿದೆ.ಮಾರಣಾಂತಿಕ ಕರೋನಾ  ವೈರಸ್  ಪೀಡಿತ  ಚೈನಾದ  ವುಹಾನ್  ನಗರದಿಂದ   ಪಾಕಿಸ್ತಾನಿ    ನಾಗರೀಕರನ್ನು  ಇಸ್ಲಾಮಾಬಾದ್ ಗೆ     ಸ್ಥಳಾಂತರಿಸಲು   ತಾನು ಸಿದ್ಧ  ಎಂದು ಪ್ರಕಟಿಸಿದೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ  ಸರ್ಕಾರ  ಮಹತ್ವದ  ನಿರ್ಧಾರ ಕೈಗೊಂಡಿದೆ.ಮಾರಣಾಂತಿಕ ಕರೋನಾ  ವೈರಸ್  ಪೀಡಿತ  ಚೈನಾದ  ವುಹಾನ್  ನಗರದಿಂದ   ಪಾಕಿಸ್ತಾನಿ    ನಾಗರೀಕರನ್ನು  ಇಸ್ಲಾಮಾಬಾದ್ ಗೆ     ಸ್ಥಳಾಂತರಿಸಲು   ತಾನು ಸಿದ್ಧ  ಎಂದು ಪ್ರಕಟಿಸಿದೆ

ನೆರೆ ಹೊರೆ ಮೊದಲು ಎಂಬ ತನ್ನ ದೇಶದ   ನೀತಿಯಂತೆ  ಪಾಕಿಸ್ತಾನಕ್ಕೆ  ಈ ವಿಷಯದಲ್ಲಿ  ಸಹಕರಿಸಲು ಮುಂದಾಗಿದೆ. ಈ ಸಂಬಂಧ  ವಿದೇಶಾಂಗ ವ್ಯವಹಾರಗಳ ಸಚಿವ  ಎಸ್.  ಜೈಶಂಕರ್  ರಾಜ್ಯಸಭೆಯಲ್ಲಿ  ಹೇಳಿಕೆ ನೀಡಿದ್ದಾರೆ. ವುಹಾನ್‌ನಲ್ಲಿರುವ ಭಾರತೀಯರೊಂದಿಗೆ ಎಲ್ಲಾ ನೆರೆಹೊರೆ ದೇಶದ ನಾಗರೀಕರನ್ನು  ಸ್ಥಳಾಂತರಿಸಲಾಗುವುದು  ಎಂದು ಹೇಳಿದ್ದಾರೆ.
 
ವಾಸ್ತವವಾಗಿ ಚೈನಾದಿಂದ  ಭಾರತ  ಇತ್ತೀಚೆಗೆ ತನ್ನ ನಾಗರಿಕರನ್ನು ವಿಶೇಷ  ವಿಮಾನದ  ಮೂಲಕ  ವಾಪಸ್ಸು ಕರೆಸಿಕೊಂಡಿದೆ.   ಇಂಡೋನೇಷ್ಯಾ ಮತ್ತು ಸುಡಾನ್ ಕೂಡ ತಮ್ಮ  ನಾಗರೀಕರನ್ನು   ಹಿಂದೆಕರೆಸಿಕೊಂಡಿದೆ.  ಆದರೆ,  ಪಾಕಿಸ್ತಾನ  ಮಾತ್ರ  ಈ ವಿಷಯದಲ್ಲಿ  ತನ್ನ  ಅಸಹಾಯಕತೆ ವ್ಯಕ್ತಪಡಿಸಿದ್ದು,  ಕರೋನಾ ವೈರಸ್ ವಿರುದ್ಧ ಹೋರಾಡುವ ಶಕ್ತಿ ಇಲ್ಲದ ಕಾರಣ ಪಾಕಿಸ್ತಾನದ  ವಿದ್ಯಾರ್ಥಿಗಳು  ವುಹಾನ್‌ನಲ್ಲಿ ಉಳಿಯುವಂತೆ ಸೂಚಿಸಿದೆ

 ಇಮ್ರಾನ್ ಸರ್ಕಾರದ ನಿರ್ಧಾರದಿಂದ  ವುಹಾನ್ ನಲ್ಲಿರುವ  ಪಾಕ್ ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿದ್ದಾರೆ. ಈ ನಿರ್ಧಾರದಿಂದ  ಪಾಕಿಸ್ತಾನ  ವಿಶ್ವದಾದ್ಯಂತ  ತೀವ್ರ ಟೀಕೆಗೊಳಗಾಗಿದೆ. ಆದರೆ, ಸಂಕಷ್ಟದಲ್ಲಿರುವ ಪಾಕಿಸ್ತಾನಿ ವಿದ್ಯಾರ್ಥಿಗಳನ್ನು ರಕ್ಷಿಸುವ  ಭಾರತದ ಪ್ರಸ್ತಾಪಕ್ಕೆ  ಮೆಚ್ಚುಗೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT