ಸಂಗ್ರಹ ಚಿತ್ರ 
ದೇಶ

ಇಂಟರ್‌ನೆಟ್ ಸಂಪರ್ಕ ಮೂಲಭೂತ ಹಕ್ಕಲ್ಲ, ರಾಷ್ಟ್ರ ಭದ್ರತೆಯೇ ಮುಖ್ಯ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

ಅಂತರ್ಜಾಲ ಸಂಪರ್ಕ ಮೂಲಭೂತ ಹಕ್ಕು, ಅದು ದೇಶದ ಪ್ರತೀಯೊಬ್ಬ ನಾಗರೀಕನನ್ನೂ ತಲುಪಬೇಕು ಎಂಬ ವಾದದಲ್ಲಿ ಹುರುಳಿಲ್ಲ. ಇಂಟರ್ನೆಟ್ ಮೂಲಭೂತ ಹಕ್ಕಲ್ಲ ಎಂದು ಕೇಂದ್ರ ಕಾನೂನು, ನ್ಯಾಯ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನವದೆಹಲಿ: ಅಂತರ್ಜಾಲ ಸಂಪರ್ಕ ಮೂಲಭೂತ ಹಕ್ಕು, ಅದು ದೇಶದ ಪ್ರತೀಯೊಬ್ಬ ನಾಗರೀಕನನ್ನೂ ತಲುಪಬೇಕು ಎಂಬ ವಾದದಲ್ಲಿ ಹುರುಳಿಲ್ಲ. ಇಂಟರ್ನೆಟ್ ಮೂಲಭೂತ ಹಕ್ಕಲ್ಲ ಎಂದು ಕೇಂದ್ರ ಕಾನೂನು, ನ್ಯಾಯ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಅಂತರ್ಜಾಲದ ಸಂಪರ್ಕದ ಹಕ್ಕಿನ ಕುರಿತ ತಪ್ಪುಗ್ರಹಿಕೆಯನ್ನು ನಿವಾರಿಸಬೇಕಾದ ಅಗತ್ಯವಿದೆಯೆಂದು ರವಿಶಂಕರ್ ಪ್ರಸಾದ್ ರಾಜ್ಯಸಭೆಗೆ ತಿಳಿಸಿದ್ದಾರೆ. 'ಇಂಟರ್‌ನೆಟ್ ಸಂಪರ್ಕದ ಹಕ್ಕು ಮೂಲಭೂತ ಹಕ್ಕಾಗಿದೆಯೆಂದು ಯಾವುದೇ ನ್ಯಾಯವಾದಿ ವಾದಿಸಿಲ್ಲವೆಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಹೀಗಾಗಿ ಈ ಕುರಿತ ತಪ್ಪುಗ್ರಹಿಕೆಯನ್ನು ಸರಿಪಡಿಸುವ ಅಗತ್ಯವಿದೆ.  ಚಿಂತನೆಗಳು ಹಾಗೂ ಅಭಿಪ್ರಾಯಗಳ ಸಂವಹನಕ್ಕೆ ಇಂಟರ್‌ನೆಟ್ ಅನ್ನು ಕೂಡಾ ನಿಮ್ಮ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿ ಪರಿಗಣಿಸಬೇಕಾಗುತ್ತದೆ ಎಂದಷ್ಟೇ ಸುಪ್ರೀಂಕೋರ್ಟ್ ಹೇಳಿದೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತಿಪಕ್ಷ ನಾಯಕ ಗುಲಾಂ ನಬಿ ಆಝಾದ್ ಅವರ ಪೂರಕ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ರವಿಶಂಕರ್‌ಪ್ರಸಾದ್, 'ಕಾಶ್ಮೀರದಲ್ಲಿ ಹಿಂಸಾಚಾರ ಹಾಗೂ ಭಯೋತ್ಪಾದನೆಯನ್ನು ಹರಡಲು ಇಂಟರ್ನೆಟ್‌ ಅನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತದೆಯೆಂಬುದನ್ನು ಯಾರೂ ಕೂಡಾ ಅಲ್ಲಗಳೆಯಲು ಸಾಧ್ಯವಿಲ್ಲ. ಕಾಶ್ಮೀರದಲ್ಲಿ ಪಾಕಿಸ್ತಾನವು ಅದನ್ನೇ ಮಾಡುತ್ತಿದೆ ಮತ್ತು ಭಯೋತ್ಪಾದಕ ಗುಂಪು ಐಸಿಸ್ ಕೂಡಾ ಇಂಟರ್ನೆಟ್‌ನಿಂದಲೇ ಬೆಳೆಯಿತೆಂಬುದನ್ನು ಯಾರೂ ಮರೆಯಬಾರದು ಎಂದು ಹೇಳಿದರು.

ಅಂತೆಯೇ ಸಂವಿಧಾನವು ನಮಗೆ ಹಕ್ಕುಗಳನ್ನು ಕೊಡುವ ಜೊತೆಗೆ ಅವುಗಳ ನಿಯಂತ್ರಣಕ್ಕೂ ಅಷ್ಟೇ ಒತ್ತು ನೀಡಿದೆ. ನೀವು ಇಂಟರ್ನೆಟ್ ಬಳಸಿರಿ, ಅದರೆ ಅದರ ಮೂಲಕ ನೀವು ಹಿಂಸಾಚಾರವನ್ನು ಸೃಷ್ಟಿಸಬಾರದು ಹಾಗೂ ದೇಶದ ಏಕತೆ, ಸಮಗ್ರತೆ ಹಾಗೂ ಭದ್ರತೆಯನ್ನು ದುರ್ಬಲಗೊಳಿಸಕೂಡದು. ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾಗಿ ಗುಲಾಂ ನಬಿ ಆಜಾದ್ ಕೂಡಾ ಉಗ್ರರ ಹಿಟ್ ಲಿಸ್ಟ್‌ನಲ್ಲಿದ್ದು, ಅವರಿಗೂ ಇಂಟರ್ನೆಟ್ ದುರ್ಬಳಕೆಯ ಅರಿವಿದೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!