ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ 
ದೇಶ

ಐದು ದಿನಗಳ ಭಾರತ ಭೇಟಿಗಾಗಿ ನವದೆಹಲಿಗೆ ಬಂದಿಳಿದ ಶ್ರೀಲಂಕಾ ಪ್ರಧಾನಿ ರಾಜಪಕ್ಸೆ

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಐದು ದಿನಗಳ ಭಾರತ ಭೇಟಿಗೆ ಶುಕ್ರವಾರ  ಇಲ್ಲಿಗೆ ಆಗಮಿಸಿದರು

ನವದೆಹಲಿ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಐದು ದಿನಗಳ ಭಾರತ ಭೇಟಿಗೆ ಶುಕ್ರವಾರ  ಇಲ್ಲಿಗೆ ಆಗಮಿಸಿದರು

ಕಳೆದ ವರ್ಷ ನವೆಂಬರ್ ನಲ್ಲಿ ಅವರು ಶ್ರೀಲಂಕಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ವಿದೇಶ ಪ್ರವಾಸವಾಗಿದ್ದು, ರಾಜಪಕ್ಸೆ ಅವರೊಂದಿಗೆ 10 ಸದಸ್ಯರ ನಿಯೋಗವೂ ಆಗಮಿಸಿದೆ.

ಭೇಟಿಯ ವೇಳೆ  ರಾಜಪಕ್ಸೆ ಅವರು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ವಿದೇಶಾಂಗ ಸಚಿವ  ಎಸ್ ಜೈಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಮಾತುಕತೆ ರಾಜಕೀಯ, ವ್ಯಾಪಾರ, ಅಭಿವೃದ್ಧಿ, ರಕ್ಷಣಾ ಮತ್ತು ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಮುಂತಾದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಲಿದೆ.

ಈ  ಭೇಟಿಯೊಂದಿಗೆ ಸಹಕಾರದ ಹೊಸ ಮಾರ್ಗಗಳನ್ನು ಕಂಡುಕೊಳ್ಳಲು ಮತ್ತು ನಮ್ಮ ರಾಷ್ಟ್ರಗಳ ನಡುವೆ  ಈಗಾಗಲೇ ಅಸ್ತಿತ್ವದಲ್ಲಿರುವ ಸಂಬಂಧಗಳನ್ನು ಬಲಪಡಿಸಲು ಎದುರು ನೋಡುತ್ತಿದ್ದೇನೆ ಎಂದು  ರಾಜಪಕ್ಸೆ ಟ್ವೀಟ್ ನಲ್ಲಿ ತಿಳಿಸಿದ್ದಾರೆ
ಉಭಯ ದೇಶಗಳ ನಿಯೋಗಗಳು  ಇಂಡೋ-ಶ್ರೀಲಂಕಾ ವಾರ್ಷಿಕ ಭದ್ರತಾ ಸಂವಾದ ಮತ್ತು ಭಾರತ, ಶ್ರೀಲಂಕಾ, ಮಾಲ್ಡೀವ್ಸ್  ತ್ರಿಪಕ್ಷೀಯ ಕಡಲ ಭದ್ರತಾ ಒಪ್ಪಂದದ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ

ದೆಹಲಿಯ ಅಧಿಕೃತ ಮಾತುಕತೆಯ ನಂತರ, ಶ್ರೀಲಂಕಾದ ಪ್ರಧಾನಿ ಭಾನುವಾರ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಸಾರನಾಥ ಬೌದ್ಧ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಅವರು ಕೊಲಂಬೊಗೆ ತೆರಳುವ ಮೊದಲು ಸೋಮವಾರ ಬೋಧಗಯಾ ಮತ್ತು ತಿರುಪತಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT