ಸಂಗ್ರಹ ಚಿತ್ರ 
ದೇಶ

#ಸಿಎಎ; ದೆಹಲಿ ಚುನಾವಣೆ ಬಳಿಕ ಶಾಹೀನ್ ಬಾಗ್ ಪ್ರತಿಭಟನೆ ಕುರಿತ ವಿಚಾರಣೆ ಎಂದ ಸುಪ್ರೀಂ ಕೋರ್ಟ್!

ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆ ಕುರಿತ ಅರ್ಜಿ ವಿಚಾರಣೆಯನ್ನು ದೆಹಲಿ ಚುನಾವಣೆ ಬಳಿಕ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.

ನವದೆಹಲಿ: ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆ ಕುರಿತ ಅರ್ಜಿ ವಿಚಾರಣೆಯನ್ನು ದೆಹಲಿ ಚುನಾವಣೆ ಬಳಿಕ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.

ದೆಹಲಿಯ ಶಾಹಿನ್ ಬಾಗ್ ​ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಅವರು ದೆಹಲಿ ಚುನಾವಣೆ ಬಳಿಕ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದ್ದಾರೆ.

ಶಾಹೀನ್ ಬಾಗ್ ಸಮಸ್ಯೆ ಕುರಿತು ನಮಗೂ ಅರಿವಿದ್ದು ಅದರ ನಿವಾರಣೆ ಕೂಡ ಮುಖ್ಯ. ಆದರೆ ಸೋಮವಾರ ಅಂದರೆ ದೆಹಲಿ ಚುನಾವಣೆ ಬಳಿಕ ಈ ಕುರಿತ ವಿಚಾರಣೆ ನಡೆಸಿದರೆ ಸೂಕ್ತ ಎಂದೆನಿಸುತ್ತದೆ ಎಂದು ಪೀಠ ಹೇಳಿದೆ. ಅಂತೆಯೇ ಈ ಪ್ರಕರಣವನ್ನು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಪೀಠ, ಅಗತ್ಯ ಬಿದ್ದರೆ ಹೈಕೋರ್ಟ್ ಗೆ ನಿರ್ದೇಶನ ನೀಡುತ್ತೇವೆ ಎಂದು ಹೇಳಿದೆ. ಅಂತೆಯೇ ಇದೇ ವಿಚಾರವಾಗಿ ದೆಹಲಿ ಹೈಕೋರ್ಟ್ ಕೂಡ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು.

ಕಳೆದ ಡಿಸೆಂಬರ್ 15ರಿಂದ ಶಾಹೀನ್ ಬಾಗ್ ಮತ್ತು ಕಲಿಂದಿ ಕುಂಜ್ ಪ್ರದೇಶದಲ್ಲಿ ಸಿಎಎ ವಿರುದ್ಧದ ಪ್ರತಿಭಟನೆ ಹೆಸರಲ್ಲಿ ಪ್ರತಿಭಟನಾಕಾರರು ಸಂಚಾರ ವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ದೆಹಲಿ ಟ್ರಾಫಿಕ್ ಪೊಲೀಸರಿಗೆ ನಿರ್ದೇಶನ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಸಿಕೊಡಬೇಕು ಎಂದು ವಕೀಲ ಅಮಿತ್ ಸಹ್ನಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅಲ್ಲದೆ ಪ್ರತಿಭಟನೆ ಮೂಲಕ ದೆಹಲಿ ಚುನಾವಣೆಯಲ್ಲಿ ಮತದಾರರ ಗಮನವನ್ನು ಸೆಳೆಯುವ ಪ್ರಯತ್ನ ಕೂಡ ಮಾಡಲಾಗುತ್ತಿದೆ ಎಂದು ಅಮಿತ್ ಸಹ್ನಿ ಆರೋಪಿಸಿದ್ದರು.

ಇದಲ್ಲದೆ ಮಾಜಿ ದೆಹಲಿ ಶಾಸಕ ನಂದ ಕಿಶೋರ್ ಗಾರ್ಗ್ ಅವರು, ತಮ್ಮ ವಕೀಲ ಸುಶಾಂತ್ ಡಿಯೋ ಸುಧಿ ಅವರ ಮುಖಾಂತರ ಶಾಹೀನ್ ಬಾಗ್ ಪ್ರತಿಭಟನಾಕಾರರ ತೆರವುಗೊಳಿಸುವ ಕುರಿತು ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT