ಪ್ರಧಾನಿ ನರೇಂದ್ರ ಮೋದಿ 
ದೇಶ

ರಾಜ್ಯಸಭೆಯಲ್ಲಿ ಮೋದಿ ಭಾಷಣ: ಪದವೊಂದನ್ನು ಕಡತದಿಂದ ತೆಗೆದು ಹಾಕಲು ನಿರ್ದೇಶಿಸಿದ ಸಭಾಪತಿ

ಅಪರೂಪದ ವಿದ್ಯಮಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪದವೊಂದನ್ನು ಕಡತದಿಂದ ತೆಗೆದು ಹಾಕಲಾಗಿದೆ. 

ನವದೆಹಲಿ:ಅಪರೂಪದ ವಿದ್ಯಮಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪದವೊಂದನ್ನು ಕಡತದಿಂದ ತೆಗೆದು ಹಾಕಲಾಗಿದೆ. 

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಬಳಸಿದ ಪದವೊಂದನ್ನು ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ಕಡತದಿಂದ ತೆಗೆದು ಹಾಕಿದ್ದಾರೆ.

ಫೆಬ್ರವರಿ 6ರಂದು ಸಂಜೆ 6 -20 ಮತ್ತು 6-30ರಲ್ಲಿನ  ರಾಜ್ಯಸಭಾ ಪ್ರಕ್ರಿಯೆಯ ನಿರ್ದಿಷ್ಠ ಭಾಗವನ್ನು ತೆಗೆದುಹಾಕುವಂತೆ ಸಭಾಪತಿ ನಿರ್ದೇಶಿಸಿದ್ದಾರೆ ಎಂದು ರಾಜ್ಯಸಭಾ ಕಾರ್ಯದರ್ಶಿ ಹೇಳಿದ್ದಾರೆ.

ಪ್ರತಿದಿನ ಕಲಾಪ ಮುಗಿದ ಬಳಿಕ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು ದಾಖಲೆಗಳನ್ನು ಪರಿಶೀಲಿಸುತ್ತಾರೆ. ಯಾವುದಾದರೂ ಪದ ಸದನಕ್ಕೆ ಹೊಂದಿಕೆಯಾಗುವುದಿಲ್ಲ ಎನ್ನುವುದು ಮನವರಿಕೆಯಾದರೆ ತೆಗೆಸಿ ಹಾಕುತ್ತಾರೆ. ಹಿಂದೆ ಹಲವಾರು ಸಂದರ್ಭಗಳಲ್ಲಿ ಇದು ನಡೆದಿದೆ. ಆದರೆ ಪ್ರಧಾನಿ ಮೋದಿಯವರು ಆಡಿದ ಪದವನ್ನೇ ತೆಗೆಸಿ ಹಾಕಿರುವ ಕೆಲವೇ ಕೆಲವು ದೃಷ್ಟಾಂತಗಳಲ್ಲಿ ಇದೂ ಒಂದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ