ಮತದಾನ ಮಾಡಿದ ಬಂದ ಸಿಎಂ ಕೇಜ್ರಿವಾಲ್ 
ದೇಶ

ದೆಹಲಿ ಜನತೆ ಮತ್ತೊಂದು ಅವಧಿಗೆ ಅವಕಾಶ ನೀಡಲಿದೆ: ಸಿಎಂ ಕೇಜ್ರಿವಾಲ್ ವಿಶ್ವಾಸ

ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದೊಂದಿಗೆ ಸಿವಿಲ್ ಲೈನ್ಸ್‌ನ ಮತಗಟ್ಟೆಯೊಂದರಲ್ಲಿ ಹಕ್ಕು ಚಲಾಯಿಸಿದರು.

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದೊಂದಿಗೆ ಸಿವಿಲ್ ಲೈನ್ಸ್‌ನ ಮತಗಟ್ಟೆಯೊಂದರಲ್ಲಿ ಹಕ್ಕು ಚಲಾಯಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ಸರ್ಕಾ‍ರದ ಪ್ರಗತಿ ಪರ ಕಾರ್ಯಗಳನ್ನು ಪರಿಗಣಿಸಿಜನರು ಮತ ಚಲಾಯಿಸುತ್ತಾರೆ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ದೆಹಲಿಯಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಹಿಳೆಯರು ತಪ್ಪದೆ ಮತ ಚಲಾಯಿಸಿ
ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತ ಚಲಾಯಿಸುವಂತೆ ಆಮ್ ಆದ್ಮಿ ರಾಷ್ಟ್ರೀಯ ಸಂಚಾಲಕ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿಮಾಡಿದ್ದಾರೆ. "ನಿಮ್ಮ ಮನೆಯ ಜವಾಬ್ದಾರಿಯನ್ನು ನೀವು ಹೊತ್ತುಕೊಂಡಂತೆಯೇ, ದೇಶ ಮತ್ತು ದೆಹಲಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಿ. ಎಲ್ಲಾ ಮಹಿಳೆಯರು ಮತ ಚಲಾಯಿಸಲು ಹೋಗಬೇಕು ಮತ್ತು ಅವರ ಮನೆಯ ಪುರುಷರನ್ನು ಸಹ ಕರೆದೊಯ್ಯಬೇಕು" ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT