ಕಮಾಂಡ್ ಪೋಸ್ಟ್ ನಿರಾಕರಣೆ ಧೈರ್ಯಶಾಲಿ ಅಧಿಕಾರಿಗಳ ಘನತೆಗೆ ಘಾಸಿ: ಮಹಿಳಾ ಸೇನಾಧಿಕಾರಿಗಳ ಅಸಮಾಧಾನ 
ದೇಶ

ಕಮಾಂಡ್ ಪೋಸ್ಟ್ ನಿರಾಕರಣೆ ಧೈರ್ಯಶಾಲಿ ಅಧಿಕಾರಿಗಳ ಘನತೆಗೆ ಘಾಸಿ: ಮಹಿಳಾ ಸೇನಾಧಿಕಾರಿಗಳ ಅಸಮಾಧಾನ

ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಕ್ಗೆ ಪರ್ಮನೆಂಟ್ ಕಮಿಷನ್ ನೀತಿ ರೂಪಿಸುವುದಕ್ಕೆ ತಡ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆ ಬಗ್ಗೆ ಮಹಿಳಾ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಪರ್ಮನೆಂಟ್ ಕಮಿಷನ್ ನೀತಿ ರೂಪಿಸುವುದಕ್ಕೆ ತಡ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆ ಬಗ್ಗೆ ಮಹಿಳಾ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮಹಿಳಾ ಅಧಿಕಾರಿಗಳು ತಮ್ಮ ಧೈರ್ಯ ಸಾಹಸಗಳನ್ನು ಸಾಬೀತುಪಡಿಸಿದ್ದಾರೆ. ಸತತ 30 ವರ್ಷಗಳ ಸೇನೆಯಲ್ಲಿ ಸತ್ವ ಪರೀಕ್ಷೆ ಎದುರಿಸಿದ್ದಾರೆ. ಸೈನಿಕರು/ ಪುರುಷರು ಮಹಿಳಾ ಅಧಿಕಾರಿಗಳ ಕಮಾಂಡ್ ನ್ನು ನಿರಾಕರಿಸಿರುವ ಉದಾಹರಣೆಗಳಿಲ್ಲ ಎಂದು ಮಹಿಳಾ ಅಧಿಕಾರಿಗಳು ಲಿಖಿತ ರೂಪದಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. 

ಸೇನೆಯಲ್ಲಿ ಮಹಿಳೆಯರಿಗೆ ಪರ್ಮನೆಂಟ್ ಕಮಿಷನ್(ಪಿಸಿ) ನೀಡಬೇಕೆಂದು ಆಗ್ರಹಿಸಿ ಮಹಿಳಾ ಅಧಿಕಾರಿಗಳ ಪರವಾಗಿ ಹಿರಿಯ ಅಡ್ವೊಕೇಟ್ ಐಶ್ವರ್ಯಾ ಭಾಟಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರ ಭಾಗವಾಗಿ ಮಹಿಳಾ ಅಧಿಕಾರಿಗಳು ಲಿಖಿತ ರೂಪದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

10 ಕಾಂಬಾಟ್ ಸಪೀರ್ಟ್ ಆರ್ಮ್ಸ್ ನಲ್ಲಿ ಮಹಿಳಾ ಅಧಿಕಾರಿಗಳು ಕಳೆದ 27-28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಧೈರ್ಯ ಸಾಹಸಗಳನ್ನು ಪ್ರದರ್ಶಿಸುತ್ತಿದ್ದಾರೆ. ಅವರಿಗೆ ಕಮಾಂಡ್ ನೇಮಕಾತಿಯನ್ನು ನಿರಾಕರಣೆ ಮಾಡುವುದರಿಂದ ಧೈರ್ಯಶಾಲಿ ಅಧಿಕಾರಿಗಳ ಘನತೆಗೆ ಘಾಸಿ ಉಂಟಾಗುತ್ತದೆ ಎಂದು ವಕೀಲರು ವಾದ ಮಂಡಿಸಿದ್ದಾರೆ. 

ವಿಚಾರಣೆ ಆಲಿಸಿರುವ ಡಿವೈ ಚಂದ್ರಚೂಡ್, ಅಜಯ್ ರಸ್ತೋಗಿ ಅವರಿದ್ದ ಸುಪ್ರೀಂ ಕೋಟ್ ವಿಭಾಗೀಯ ಪೀಠ, ಈ ಕುರಿತ ಆದೇಶವನ್ನು ಕಾಯ್ದಿರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT