ಮಂಗಳೂರಿಗೆ ತೆರಳುತ್ತಿದ್ದ ಎರಡು ರೈಲುಗಳಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ! 
ದೇಶ

ಮಂಗಳೂರಿಗೆ ತೆರಳುತ್ತಿದ್ದ ಎರಡು ರೈಲುಗಳಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ! 

ಮಂಗಳೂರಿಗೆ ತೆರಳುತ್ತಿದ್ದ ಎರಡು ಪ್ರತ್ಯೇಕ ರೈಲುಗಳಲ್ಲಿ ಎರಡು ಕುಟುಂಬಗಳಿಂದ ಬರೊಬ್ಬರಿ 20 ಲಕ್ಷ ರೂಪಾಯಿ ಮೌಲ್ಯದ ವಜ್ರದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿದೆ. 

ಕೋಯಿಕ್ಕೋಡ್: ಮಂಗಳೂರಿಗೆ ತೆರಳುತ್ತಿದ್ದ ಎರಡು ಪ್ರತ್ಯೇಕ ರೈಲುಗಳಲ್ಲಿ ಎರಡು ಕುಟುಂಬಗಳಿಂದ ಬರೊಬ್ಬರಿ 20 ಲಕ್ಷ ರೂಪಾಯಿ ಮೌಲ್ಯದ ವಜ್ರದ ಚಿನ್ನಾಭರಣ, ನಗದು ದರೋಡೆ ಮಾಡಲಾಗಿದೆ. 

ಚೆನ್ನೈ-ಮಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಹಾಗು ತಿರುವನಂತಪುರಂ-ಮಂಗಳೂರು ಮಲ್ಬಾರ್ ಎಕ್ಸ್ ಪ್ರೆಸ್ ರೈಲುಗಳ ಹವಾನಿಯಂತ್ರಿತ ಬೋಗಿಗಳಲ್ಲಿ ಈ ದರೋಡೆ ಪ್ರಕರಣ ನಡೆದಿದೆ. 

ಚೆನ್ನೈ-ಮಂಗಳೂರು ರೈಲಿನ ಘಟನೆ ತಿರುಪುರ್-ತಿರೂರಿನಲ್ಲಿ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. 54 ವರ್ಷದ ಮಹಿಳಾ ಪ್ರಯಾಣಿಕರಾದ ಪೊನ್ನಿಮಾರನ್ ಅವರ ದೂರಿನ ಪ್ರಕಾರ 15 ಲಕ್ಷ ರೂಪಾಯಿ ಮೌಲ್ಯದ ವಜ್ರ, ಚಿನ್ನದ ಭರಣಗಳಿದ್ದ ಬ್ಯಾಗ್, 22,000 ರೂಪಾಯಿ ನಗದು ಕಳ್ಳತನವಾಗಿದೆ. ತಕ್ಷಣೆವೇ ಎಚ್ಚೆತ್ತ ಕುಟುಂಬ ಸದಸ್ಯರು ಪೊಲೀಸ್ ಹಾಗೂ ಆರ್ ಪಿಎಫ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಮುಂದಿನ ನಿಲ್ದಾಣದಲ್ಲಿಯೇ ಪೊಲೀಸರು ಕುಟುಂಬದಿಂದ ಹೇಳಿಕೆಗಳನ್ನು ಪಡೆದಿದ್ದಾರೆ. 

ಮಲ್ಬಾರ್ ಎಕ್ಸ್ ಪ್ರೆಸ್ ರೈಲಿನ ಘಟನೆ ವಡಕರ ಹಾಗೂ ಮಹೇ ನಿಲ್ದಾಣಗಳಲ್ಲಿ ನಡೆದಿದ್ದು, ಸಿಂಗಪೂರ್ ನಿಂದ ನೆಡುಂಬಸ್ಸೆರಿ ಏರ್ ಪೋರ್ಟ್ ಗೆ ಬಂದು, ನಂತರ ಮಲ್ಬಾರ್ ಎಕ್ಸ್ ಪ್ರೆಸ್ ಮೂಲಕ ಕಣ್ಣೂರಿಗೆ ತೆರಳುತ್ತಿದ್ದ ಕುಟುಂಬದವರಿಂದ ಸುಮಾರು 9 ಸವರನ್ ಚಿನ್ನ ಕಳ್ಳತನವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಪಿಎಫ್ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!