ಕಳೆದ ವರ್ಷ ಪುಲ್ವಾಮಾ ದಾಳಿ ನಂತರದ ದೃಶ್ಯ 
ದೇಶ

ಪುಲ್ವಾಮಾ ಮಾದರಿ ದಾಳಿಗೆ ಪಾಕಿಸ್ತಾನ ಸಜ್ಜು, 27 ಉಗ್ರರಿಗೆ ಬಾಲಕೋಟ್ ನಲ್ಲಿ ತರಬೇತಿ: ಸ್ಫೋಟಕ ಮಾಹಿತಿ ಬಹಿರಂಗ

ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಒಂದು ವರ್ಷವಾಗುತ್ತಾ ಬರುತ್ತಿರುವ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಒಂದು ವರ್ಷವಾಗುತ್ತಾ ಬರುತ್ತಿರುವ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.


ಭಾರತದ ವಿರುದ್ಧ ಬಹುದೊಡ್ಡ ಸಂಚು ರೂಪಿಸಿರುವ ಪಾಕಿಸ್ತಾನ ಜೈಶ್ ಎ ಮೊಹಮ್ಮದ್ ಸಂಘಟನೆಯ ಒಟ್ಟು 27 ಉಗ್ರರಿಗೆ ಭಾರತದೊಳಗೆ ನುಸುಳಿ ದಾಳಿ ನಡೆಸಲು ಬಾಲಕೋಟ್ ನಲ್ಲಿ ತರಬೇತಿ ನೀಡುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.
ಆಫ್ಘಾನಿಸ್ತಾನದ ಉಗ್ರರು ಪಾಕಿಸ್ತಾನದ ಈ ಉಗ್ರರಿಗೆ ತರಬೇತಿ ನೀಡುತ್ತಿದ್ದು ಅವರಲ್ಲಿ 8 ಮಂದಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದವರಾಗಿದ್ದಾರೆ. ಬಾಲಕೋಟ್ ನ ಉಗ್ರರ ಶಿಬಿರವನ್ನು ನಡೆಸುತ್ತಿರುವುದು ಭಯೋತ್ಪಾದಕ ಮೌಲಾನಾ ಮಸೂದ್ ಅಝರ್ ಪುತ್ರ ಯೂಸಫ್ ಅಝರ್.


ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಇಬ್ಬರು ಉಗ್ರರು ಮತ್ತು ಆಫ್ಘಾನಿಸ್ತಾನದ ಮೂವರು ಈ 27 ಉಗ್ರರಿಗೆ ತರಬೇತಿ ನೀಡುತ್ತಿದ್ದಾರೆ. ಇದರಿಂದಾಗಿಯೇ ಉಗ್ರರಿಗೆ ಒಳನುಸುಳಲು ಸಹಾಯವಾಗಲು ಪಾಕಿಸ್ತಾನ ಪದೇ ಪದೇ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸುತ್ತಿರುವುದು ಎನ್ನಲಾಗಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಇದೇ ಫೆಬ್ರವರಿ 14ಕ್ಕೆ ಒಂದು ವರ್ಷವಾಗುತ್ತದೆ. ಈ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. 


ಇದಕ್ಕೆ ಪ್ರತಿಯಾಗಿ ಭಾರತ ಸೇನೆ ಕಳೆದ ವರ್ಷ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರ ತರಬೇತಿ ಶಿಬಿರದ ಮೇಲೆ ವಾಯುದಾಳಿ ನಡೆಸಿ ಜೈಶ್ ಎ ಮೊಹಮ್ಮದ್ ಸಂಘಟನೆಯ ತರಬೇತಿ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇದರಲ್ಲಿ ಹಲವು ಉಗ್ರರು ಮೃತಪಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT