ದೇಶ

ಮುಂಬೈ: ಗ್ಯಾಸ್ ಸಿಲೆಂಡರ್ ಸ್ಫೋಟಗೊಂಡು ಬೆಂಕಿ ಅವಘಡ, 7 ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ನವೀ ಮುಂಬಯಿಯ 21 ಅಂತಸ್ತಿನ ವಸತಿ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಏಳು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಥಾಣೆ(ಮಹಾರಾಷ್ಟ್ರ): ನವೀ ಮುಂಬಯಿಯ 21 ಅಂತಸ್ತಿನ ವಸತಿ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಏಳು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಈ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು , ಪಾಮ್ ಬೀಚ್ ರಸ್ತೆ ಬಳಿಯ ಸೀವುಡ್ ನಲ್ಲಿರುವ  ಸೀ ಹೋಮ್ ಅಪಾರ್ಟ್ ಮೆಂಟಿನ  ಮೇಲಿನ ಎರಡು ಮಹಡಿಗಳಲ್ಲಿರುವ ಡ್ಯುಪ್ಲೆಕ್ಸ್ ಫ್ಲ್ಯಾಟ್ ನಲ್ಲಿ ಅನಾಹುತವನ್ನು ಸೃಷ್ಟಿಸಿದೆ. 

ಗಾಯಗೊಂಡ ಏಳು ಮಂದಿಯನ್ನು ಏರೋಲಿಯ ನ್ಯಾಷನಲ್ ಬರ್ನ್ಸ್ ಸೆಂಟರ್ (ಎನ್‌ಬಿಸಿ) ಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಡ್ಯುಪ್ಲೆಕ್ಸ್ ಫ್ಲಾಟ್‌ನಲ್ಲಿ ಸಿಲಿಂಡರ್ ಸ್ಫೋಟವಾಗಿ ಮೇಲಿನ ಎರಡು ಮಹಡಿಗಳಿಗೆ ಹರಡಿದೆ. , ಬೆಳಿಗ್ಗೆ 6.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ" ಎಂದು ನವೀ ಮುಂಬೈ ವಿಪತ್ತು ನಿಯಂತ್ರಣ ವಿಭಾಗದ ಮುಖ್ಯಸ್ಥ ದಾದಾಸಾಹೇಬ್ ಚಬುಕ್ಸ್ ವರ್ ಹೇಳಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ (ಟಿಎಂಸಿ) ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್‌ಡಿಎಂಸಿ) ಮುಖ್ಯಸ್ಥ ಸಂತೋಷ್ ಕದಮ್ ಅವರ ಪ್ರಕಾರ, ಬೆಂಕಿಯನ್ನು ನಿಯಂತ್ರಿಸಲು ನೆರೂಲ್, ಸಿಬಿಡಿ ಬೆಲಾಪುರ ಮತ್ತು ವಾಶಿ ಅಗ್ನಿಶಾಮಕ ಕೇಂದ್ರಗಳಿಂದ ಆರು ಅಗ್ನಿಶಾಮಕ ಯಂತ್ರಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

ಸಧ್ಯ ಬೆಂಕಿ ನಂದಿಸಲಾಗಿದ್ದು , ಕೂಲಿಂಗ್ ಕಾರ್ಯಾಚರಣೆ ನಡೆಯುತ್ತಿದೆ.ಘಟನೆ ಸಂಬಂಧ ವಿವರವಾದ ತನಿಖೆ ಕೈಗೊಳ್ಲಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT