ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ದೇಶ

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಶುದ್ದವಾದದ್ದು-ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ 

ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈ: ನನ್ನ ಹಿಂದೂತ್ವವನ್ನು ತೋರಿಸಬೇಕಿಲ್ಲ, ಅದು ಬಾಳಾ ಸಾಹೇಬ್ ಠಾಕ್ರೆ ಅವರ ಶುದ್ಧ ಹಿಂದೂತ್ವವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

 ಭಾನುವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಧ್ವಜವನ್ನು ಬದಲಾಯಿಸಲ್ಲ, ನಮ್ಮ ಹಿಂದೂತ್ವ ಏನು ಎಂಬುದನ್ನು ಇಡೀ ಜಗತ್ತಿಗೆ ಗೊತ್ತಿದೆ ಎಂದರು.

ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ನುಸುಳುಕೋರರ ವಿರುದ್ಧ ಎಂಎನ್ ಎಸ್ ಪಕ್ಷದ ರಾಜ್ ಠಾಕ್ರೆ ನೇತೃತ್ವದಲ್ಲಿ ನಡೆದ ಮೆಗಾ ರ‍್ಯಾಲಿ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಈ ರೀತಿಯ ಪ್ರತಿಕ್ರಿಯೆ ನೀಡಿದರು.

ದಕ್ಷಿಣ ಮುಂಬೈಯ ಸಹ್ಯಾದ್ರಿಯ ಶಿವಸೇನಾ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಶಿವಸೇನಾ ನಾಯಕರು ಪಾಲ್ಗೊಂಡಿದ್ದರು.

ಮಹಾರಾಷ್ಟ್ರದ ರೈತರು ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲು ಸಭೆಯನ್ನು ಆಯೋಜಿಸಿದ್ದಾಗಿ ಶಾಸಕ ದಿಲೀಪ್ ಲಾಂಡೆ ತಿಳಿಸಿದರು.ನಂತರ ಎಲ್ಲಾ ಪಕ್ಷದ ಶಾಸಕರು ಸಿಎಎ, ಎನ್ ಆರ್ ಸಿ ಬಗ್ಗೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT