ಕಾಶಿ ವಿಶ್ವನಾಥ, ಬೌದ್ಧ ಯಾತ್ರಾ ಸ್ಥಳ, ತಿರುಪತಿಗೆ ಶ್ರೀಲಂಕಾ ಪ್ರಧಾನಿ ರಾಜಪಕ್ಸ 
ದೇಶ

ಕಾಶಿ ವಿಶ್ವನಾಥ, ಬೌದ್ಧ ಯಾತ್ರಾ ಸ್ಥಳ, ತಿರುಪತಿಗೆ ಶ್ರೀಲಂಕಾ ಪ್ರಧಾನಿ ರಾಜಪಕ್ಸ

ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ 5 ದಿನಗಳ ಭಾರತ ಪ್ರವಾಸದಲ್ಲಿದ್ದು ಕಾಶಿ ವಿಶ್ವನಾಥ ದೇವಾಲಯ, ಸಾರನಾಥದಲ್ಲಿರುವ ಬೌದ್ಧ ಯಾತ್ರಾ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. 

ಲಖ್ನೋ: ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ 5 ದಿನಗಳ ಭಾರತ ಪ್ರವಾಸದಲ್ಲಿದ್ದು ಕಾಶಿ ವಿಶ್ವನಾಥ ದೇವಾಲಯ, ಸಾರನಾಥದಲ್ಲಿರುವ ಬೌದ್ಧ ಯಾತ್ರಾ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. 

ರಾಜಪಕ್ಸ ಭೇಟಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ರಾಜಪಕ್ಸ ಸಾರನಾಥ ದೇವಾಲಯಕ್ಕೆ ತೆರಳಲಿದ್ದು, ಉತ್ತರ ಪ್ರದೇಶದಲ್ಲೇ ರಾತ್ರಿ ತಂಗಲಿದ್ದಾರೆ. ಫೆ.10 ರಂದು ಬೆಳಿಗ್ಗೆ ಬೋಧ್ ಗಯಾ ಕೇಂದ್ರದಲ್ಲಿರುವ ಮಹಾಬೋಧಿ ದೇವಾಲಯಕ್ಕೆ ರಾಜಪಕ್ಸ ತೆರಳಲಿದ್ದು, ಆ ನಂತರ ತಿರುಪತಿ ವೆಂಕಟೇಶ್ವರ ದೇವಾಲಯದ ದರ್ಶನ ಮಾಡಲಿದ್ದಾರೆ. 

ಮಹಿಂದಾ ರಾಜಪಕ್ಸ ತಿರುಪತಿ ದೇವಾಲಯದ ಕಟ್ಟಾ ಭಕ್ತರಾಗಿದ್ದು, ತಿರುಪತಿ ದೇವಾಲಯದ ದರ್ಶನದ ಬಳಿಕ ಶ್ರೀಲಂಕಾಗೆ ವಾಪಸ್ಸಾಗಲಿದ್ದಾರೆ. 5 ದಿನಗಳ ಭಾರತ ಪ್ರವಾಸದಲ್ಲಿ ರಾಜಪಕ್ಸ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ವಿಷಯಗಳಾದಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT