ಸುಪ್ರೀಂಕೋರ್ಟ್ 
ದೇಶ

ಮೀಸಲು ಮೂಲಭೂತ ಹಕ್ಕಲ್ಲ, ಮೀಸಲಿಗೆ ಆದೇಶಿಸುವ ಅಧಿಕಾರ ನ್ಯಾಯಾಲಯಕ್ಕಿಲ್ಲ: ಸುಪ್ರೀಂಕೋರ್ಟ್

ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉದ್ಯೋಗ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ. ಸರ್ಕಾರಿ ಉದ್ಯೋಗದಲ್ಲಿ ಮೀಸಲು ಬೇಕೇಬೇಕು ಎಂದು ಕೇಳುವುದಕ್ಕೆ ಅದು ಯಾವುದೇ ಮೂಲಭೂತ ಹಕ್ಕಲ್ಲ...

ನವದೆಹಲಿ: ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಉದ್ಯೋಗ ಮತ್ತು ಬಡ್ತಿಯಲ್ಲಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ. ಸರ್ಕಾರಿ ಉದ್ಯೋಗದಲ್ಲಿ ಮೀಸಲು ಬೇಕೇಬೇಕು ಎಂದು ಕೇಳುವುದಕ್ಕೆ ಅದು ಯಾವುದೇ ಮೂಲಭೂತ ಹಕ್ಕಲ್ಲ. ಮೀಸಲು ನೀಡುವಂತೆ ಸರ್ಕಾರಗಳಿಗೆ ಆದೇಶಿಸುವ ಅಧಿಕಾರ ನ್ಯಾಯಾಲಯಗಳಿಗೂ ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. 

ರಾಜ್ಯ ಸರ್ಕಾರಗಳು ಕೂಡ ಕಡ್ಡಾಯವಾಗಿ ಮೀಸಲು ನೀಡಬೇಕೆು ಎಂದೇನೂ ಇಲ್ಲ. ಮೀಸಲು ನೀಡಬೇಕೇ, ಬೇಡವೇ ಎಂಬ ವಿಚಾರ ರಾಜ್ಯಗಳ ವಿವೇಚನೆಗೆ ಸಂಬಂಧಿಸಿದ್ದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 

ಮೀಸಲು ನೀಡಿಕೆ ಸಂದರ್ಭದಲ್ಲಿ ಸರ್ಕಾರಿ ನೌಕರಿಗಳಲ್ಲಿ ಎಸ್'ಸಿ-ಎಸ್'ಟಿಗೆ ಸೂಕ್ತ ಪ್ರಾತಿನಿಧ್ಯ ಇದೆಯೇ ಎಂಬ ಬಗ್ಗೆ ರಾಜ್ಯ ಸರ್ಕಾರಗಳು ಅಂಕಿ-ಅಂಶಗಳನ್ನು ಸಂಗ್ರಹಿಸಬೇಕು. ಅಗತ್ಯವಿಲ್ಲ ಎಂದು ಕಂಡುಬಂದಲ್ಲಿ ಮೀಸಲು ನೀಡಬೇಕಿಲ್ಲ ಎಂದು ನ್ಯಾ.ಎಲ್.ನಾಗೇಶ್ವರರಾವ್ ಹಾಗೂ ನ್ಯಾ.ಹೇಮಂತ ಗುಪ್ತಾ ಅವರನ್ನು ಒಳಗೊಂಡ ಪೀಠ ಹೇಳಿದೆ. 

ಸಂವಿಧಾನದ 16ನೇ ಪರಿಚ್ಛೇದದ ಪ್ರಕಾರ ಎಸ್'ಸಿ-ಎಸ್'ಟಿ ಸಮುದಾಯಕ್ಕೆ ಮೀಸಲು ನೀಡುವ ವಿವೇಚನೆ ರಾಜ್ಯ ಸರ್ಕಾರಗಳಿಗೆ ಬಿಟ್ಟಿದ್ದಾಗಿದೆ. ಆದರೆ, ಸರ್ಕಾರಿ ಹುದ್ದೆಗಳಲ್ಲಿ ಮೀಸಲು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಲಾಗದು. ರಾಜ್ಯ ಸರ್ಕಾರಗಳು ಕೂಡ ಬಡ್ತಿಯಲ್ಲಿ ಮೀಸಲು ನೀಡಲೇಬೇಕು ಎಂದೇನಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. 

ಉತ್ತರಾಖಂಡ ಸರ್ಕಾರದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್ ಸಿವಿಲ್ ಎಂಜಿನಿಯರ್ ಹುದ್ದೆಗೆ ಬಡ್ತಿ ಮೀಸಲು ನೀಡುವ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಕೋರ್ಟ್ ಈ ನಿರ್ಣಯ ನೀಡಿದೆ. ಉತ್ತರಾಖಂಡ ಸರ್ಕಾರ ಬಡ್ತಿ ಮೀಸಲು ನೀಡಲು ನಿರಾಕರಿಸಿತ್ತು. ಇದು ಹೈಕೋರ್ಟ್ ಮೆಟ್ಟಿಲೇರಿದಾಗ, ಸರ್ಕಾರಿ ಹುದ್ದೆಗಳಿಗೆ ಎಸ್'ಟಿ/ಎಸ್'ಟಿ ಪ್ರಾತಿನಿಧ್ಯ ಕುರಿತ ಮಾಹಿತಿ ಸಂಗ್ರಹಿಸಿ ಬಳಿಕ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT