ರಜನಿಕಾಂತ್ 
ದೇಶ

ಏಪ್ರಿಲ್‌ನಲ್ಲಿ ನೂತನ ಪಕ್ಷ ಪ್ರಾರಂಭಿಸಲಿರುವ ಸೂಪರ್ ಸ್ಟಾರ್ ರಜನಿಕಾಂತ್ 

ದಕ್ಷೀಣ ಭಾರತ ಚಿತ್ರರಂಗದ ಮೇರುನಟ ರಜನಿಕಾಂತ್ ಏಪ್ರಿಲ್‌ನಲ್ಲಿ ತಮ್ಮ ನೂತನ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ.  ಡಿಸೆಂಬರ್ 31, 2017 ರಂದು ರಜಿನಿ ಮಕ್ಕಳ್ ಮಂದ್ರಮ್ ನ ಘೋಷಣೆಯಾದ ಸುಮಾರು ಎರಡು ವರ್ಷಗಳ ನಂತರ ನಟ ಹಾಗೂ ಅವರ ನಿಕಟವರ್ತಿಗಳು ಏಪ್ರಿಲ್ ಗೆ ನೂತನ ಪಕ್ಷ ಪ್ರಾರಂಭಿಸುವುದಾಗಿ ಖಚಿತಪಡಿಸಿದ್ದಾರೆ.

ದಕ್ಷೀಣ ಭಾರತ ಚಿತ್ರರಂಗದ ಮೇರುನಟ ರಜನಿಕಾಂತ್ ಏಪ್ರಿಲ್‌ನಲ್ಲಿ ತಮ್ಮ ನೂತನ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ.  ಡಿಸೆಂಬರ್ 31, 2017 ರಂದು ರಜಿನಿ ಮಕ್ಕಳ್ ಮಂದ್ರಮ್ ನ ಘೋಷಣೆಯಾದ ಸುಮಾರು ಎರಡು ವರ್ಷಗಳ ನಂತರ ನಟ ಹಾಗೂ ಅವರ ನಿಕಟವರ್ತಿಗಳು ಏಪ್ರಿಲ್ ಗೆ ನೂತನ ಪಕ್ಷ ಪ್ರಾರಂಭಿಸುವುದಾಗಿ ಖಚಿತಪಡಿಸಿದ್ದಾರೆ.

ಇನ್ನೂ ಪಕ್ಷದ ಹೆಸರು ಘೋಷಣೆಯಾಗಿಲ್ಲವಾದರೂ  ರಜಿನಿ ಮಕ್ಕಳ್ ಮಂದ್ರಮ್ ನ ಉನ್ನತ ಪದಾಧಿಕಾರಿ ಹೇಳಿದಂತೆ ಏಪ್ರಿಲ್ 14 ರ ನಂತರ ಯಾವುದೇ ಸಮಯದಲ್ಲಿ ಪಕ್ಷದ ಘೋಷಣೆಯಾಗುವ ಸಾಧ್ಯತೆ ಇದೆ.

ರಜನಿಕಾಂತ್ ರಾಜಕೀಯವಾಗಿ ಬಿಜೆಪಿಯತ್ತ ವಾಲುತ್ತಿದ್ದಾರೆ ಮತ್ತು ಚೆನ್ನೈ ಮೂಲದ ಆರ್‌ಎಸ್‌ಎಸ್ ಮುಖಂಡ ಎಸ್ ಗುರುಮೂರ್ತಿಯಿಂದ ಪ್ರಭಾವಿತರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದು ತಮಿಳಾರುವಿ ಮಣಿಯನ್ ರಾಜಕೀಯ ತಂತ್ರಮತ್ತು ದಿನನಿತ್ಯದ ವ್ಯವಹಾರಗಳಲ್ಲಿ ನಟನಿಗೆ ಮಾರ್ಗದರ್ಶಕನ  ಮಾಡುತ್ತಿದೆ ಎನ್ನಲಾಗಿದೆ.

ರಜನಿಕಾಂತ್ ಅವರ  ಸಮೀಪವರ್ತಿಗಳ ಹೇಳಿಕೆಯಂತೆ ನಟನು ಈ ಬಗೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಲಲು ಬಿಜೆಪಿ ಖಚಿತವಾಗಿ ಸಹಾಯ ಮಾಡಲಿದೆ. ಬಿಜೆಪಿ ರಜನಿ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳಬಹುದು ಅಥವಾ ಮಾಡಿಕೊಳ್ಲದಿರಬಹುದು ಆದರೆ ನಟನಿಗೆ ಕಮಲ ಪಕ್ಷ ಖಚಿತವಾಗಿ ನೆರವಾಗಲಿದೆ.ಡಿಎಂಕೆಯನ್ನು ತಮಿಳುನಾಡಿನಲ್ಲಿ ಸೋಲಿಸುವ ಕನಸು ಹೊಂದಿರುವ ರಜನಿಗೆ ಕೇಸರಿ ಪಾಳಯದ ನೆರವು ಸಿಗಲಿದೆ ಎಂದು ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT