ಸಿಎಎ ವಿರೋಧಿ ಪ್ರತಿಭಟನಾಕಾರರು 
ದೇಶ

ಜಾಮಿಯಾದಿಂದ ಪಾರ್ಲಿಮೆಂಟ್ ಕಡೆಗೆ ಹೊರಟಿದ್ದ ಜಾಥಾಕ್ಕೆ ತಡೆ: ಪೊಲೀಸರೊಂದಿಗೆ ಸಿಎಎ ವಿರೋಧಿ ಪ್ರತಿಭಟನಾಕಾರರ ಜಟಾಪಟಿ

ಜಾಮಿಯಾ ವಿಶ್ವವಿದ್ಯಾನಿಲಯದಿಂದ ಪಾರ್ಲಿಮೆಂಟ್ ಕಡೆಗೆ  ಹೊರಟಿದ್ದ ಪ್ರತಿಭಟನಾ ಜಾಥಾವನ್ನು ತಡೆದ ನಂತರ ಜಾಮಿಯಾ ನಗರದ ನಿವಾಸಿಗಳು ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

ನವದೆಹಲಿ: ಜಾಮಿಯಾ ವಿಶ್ವವಿದ್ಯಾನಿಲಯದಿಂದ ಪಾರ್ಲಿಮೆಂಟ್ ಕಡೆಗೆ  ಹೊರಟಿದ್ದ ಪ್ರತಿಭಟನಾ ಜಾಥಾವನ್ನು ತಡೆದ ನಂತರ ಜಾಮಿಯಾ ನಗರದ ನಿವಾಸಿಗಳು ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

ಜಾಮಿಯಾ ಸಮನ್ವಯ ಸಮಿತಿ ನೇತೃತ್ವದಲ್ಲಿ ನಡೆದ ಈ ಜಾಥಾದಲ್ಲಿ ಜಾಮಿಯಾದ ವಿದ್ಯಾರ್ಥಿಗಳು , ಹಳೆಯ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರತಿಭಟನಾಕಾರರು ಪಾಲ್ಗೊಂಡಿದ್ದರು.ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ಸಂಸತ್ ಕಡೆಗೆ ಜಾಥಾವನ್ನು ಆಯೋಜಿಸಲಾಗಿತ್ತು.

ಸಂಸತ್ ಕಡೆಗೆ ಜಾಥಾಕ್ಕೆ ಪ್ರತಿಭಟನಾಕಾರರು ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಜಾಮಿಯಾ ವಿಶ್ವವಿದ್ಯಾಲಯದ ಸುತ್ತಮುತ್ತ ಬಿಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

ಜಾಮಿಯಾದ ಗೇಟ್ ನಂಬರ್ 7 ರಿಂದ ಜಾಥಾವನ್ನು ಪ್ರತಿಭಟನಾಕಾರರು ಆರಂಭಿಸಿದರು. ಜಾಥಾವನ್ನು ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿಕೊಂಡರೂ ಜಗ್ಗದ ಪ್ರತಿಭಟನಾಕಾರರು, ನಾವು ನಮ್ಮ ದಾಖಲೆಗಳನ್ನು ತೋರಿಸಲ್ಲ, ಬ್ರಿಟಿಷರಿಗೆ ಹೆದರಲಿಲ್ಲ, ಇತರರಿಗೆ ನಾವೇಕೆ ಹೆದರಬೇಕು ಎಂಬ ಘೋಷಣೆ ಕೂಗಿದರು.ಅನೇಕ ಮಹಿಳೆಯರು ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪುರುಷರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ ಯಾರೊಬ್ಬರೂ ಬಂದು ನಮ್ಮ ಮನವಿಯನ್ನು ಆಲಿಸಲಿಲ್ಲ. ಹಾಗಾಗೀ ಅವರ ಬಳಿಗೆ ನಾವು ಹೋಗುತ್ತಿದ್ದೇವೆ ಎಂದು ಬುರ್ಖಾ ಧರಿಸಿದ್ದ ಪ್ರತಿಭಟನಾಕಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು. 

ಜಾಥಾವನ್ನು ತಡೆಯಲು ಪೊಲೀಸರು ಮುಂದಾದಾಗ ಜಟಾಪಟಿವೇರ್ಪಟ್ಟಿತು. ಹಲವು ಪ್ರತಿಭಟನಾಕಾರರು ಪೊಲೀಸರು ಹಾಕಿದ ಬ್ಯಾರಿಕೇಡ್ ಗಳ ಮೇಲೆ ಹಾರಿದ ಪ್ರಸಂಗವೂ ನಡೆಯಿತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT