ದೇಶ

ಎಎಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದು ಎಲ್ಲರಿಗೂ ಗೊತ್ತಿದೆ- ಕಾಂಗ್ರೆಸ್ 

Nagaraja AB

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ನಾಗಾಲೋಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವಂತೆ ಆ ಪಕ್ಷವನ್ನು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ  ಅಭಿನಂದಿಸಿದ್ದಾರೆ

ಆಮ್ ಆದ್ಮಿ ಪಕ್ಷ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದು ಪ್ರತಿಯೊಬ್ಬರಿಗೂ ಗೊತ್ತಿದೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಸೋಲು ಒಳ್ಳೆಯ ಸಂದೇಶವಲ್ಲ, ಆದರೆ, ಬಿಜೆಪಿ ಹಾಗೂ ಅದರ ಕೋಮು ಸಿದ್ದಾಂತದ ವಿರುದ್ಧ ಆಮ್ ಆದ್ಮಿ ಪಕ್ಷದ ವಿಜಯ ಮಹತ್ವಪೂರ್ಣವಾದುದ್ದಾಗಿದೆ ಎಂದಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಿರ್ಧರಿಸಿದ್ದ ಕಾಂಗ್ರೆಸ್ ಕೂಡಾ ಚುನಾವಣೆಯನ್ನು ಅಷ್ಟೇನೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಪ್ರಚಾರದವರೆಗೂ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷದ ಮತಗಳು ಎಎಪಿಗೆ ವರ್ಗಾವಣೆಯಾಗಿದ್ದು, ಕೇಜ್ರಿವಾಲ್ ಮತ್ತೆ ಅಧಿಕಾರ ಹಿಡಿಯುವಲ್ಲಿ ನೆರವಾಗಿದೆ.

SCROLL FOR NEXT