ಸಂಭ್ರಮಾಚರಣೆಯಲ್ಲಿ ಆಪ್ ಪಕ್ಷ 
ದೇಶ

'ದೆಹಲಿ ಐ ಲವ್ ಯು': ಚುನಾವಣಾ ಗೆಲುವಿನ ಬಳಿಕ ಮತದಾರರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ ಎಲ್ಲ ಮತದಾರರಿಗೂ ನನ್ನ ಆತ್ಮೀಯ ವಂದನೆಗಳು ಎಂದು ಆಪ್ ನಾಯಕ ಆರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ ಎಲ್ಲ ಮತದಾರರಿಗೂ ನನ್ನ ಆತ್ಮೀಯ ವಂದನೆಗಳು ಎಂದು ಆಪ್ ನಾಯಕ ಆರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ದೆಹಲಿಯ ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳಲ್ಲಿ ಆಪ್ ಮುನ್ನಡೆ ಸಾಧಿಸಿದೆ. ಆ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರದ ಗುದ್ದುಗೆಯತ್ತ ಆಪ್ ದಾಪುಗಾಲಿರಿಸಿದ್ದು, ಇದೇ ಖುಷಿಯಲ್ಲಿ ಆಪ್ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ ಎಲ್ಲ ಮತದಾರರಿಗೂ ನನ್ನ ಆತ್ಮೀಯ ವಂದನೆಗಳು ಎಂದು ಹೇಳಿದರು.

ಇದು ನಮ್ಮ ಗೆಲುವಲ್ಲ. ದೆಹಲಿ ಜನತೆಯ ಗೆಲುವು. ಅಭಿವೃದ್ದಿಗೆ ಸಿಕ್ಕ ಗೆಲುವು. ದೆಹಲಿ ಜನತೆ ಅಭಿವೃದ್ಧಿಗೆ ತಮ್ಮ ಮತ ನೀಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅಧಿಕಾರ ನೀಡಿದ್ದಕ್ಕಾಗಿ ದೆಹಲಿಯ ಪ್ರತೀಯೊಬ್ಬ ಮತದಾರನಿಗೂ ನಾನು ತುಂಬು ಹೃದಯದ ಧನ್ಯವಾದ ಹೇಳುತ್ತೇನೆ. ಆಪ್ ಗೆ ಮತ ನೀಡುವ ಮೂಲಕ ದೆಹಲಿ ಜನತೆ ಹೊಸ ಬಗೆಯ ರಾಜಕೀಯಕ್ಕೆ ನಾಂದಿ ಹಾಡಿದ್ದಾರೆ. ರಾಜಕಾರಣದ ರಾಜಕೀಯವಲ್ಲ, ಇದು ಅಭಿವೃದ್ದಿ ಮತ್ತು ಕೆಲಸದ ರಾಜಕೀಯ. ನಾವು ಮಾಡಿದ ಕೆಲಸ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿ ದೆಹಲಿ ಜನತೆ ನಮ್ಮನ್ನು ಆರಿಸಿದ್ದಾರೆ. ಅವರ ಆಶೋತ್ತರಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಮುಂದಿನ ಐದು ವರ್ಷವೂ ಕೂಡ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಅಂತೆಯೇ ಇದೇ ವೇಳೆ ಬಿಜೆಪಿಗೆ ಟಾಂಗ್ ನೀಡಿದ ಕೇಜ್ರಿವಾಲ್, ಈ ಚುನಾವಣೆಯಲ್ಲಿ ಕೇವಲ ಆಪ್ ಮಾತ್ರವಲ್ಲ.. ಭಾರತ ಮಾತೆಯೂ ಜಯಭೇರಿ ಭಾರಿಸಿದ್ದಾಳೆ. ಈ ಹಿಂದಿನ ಐದು ವರ್ಷಗಳಂತೆಯೇ ಮುಂದಿನ ಐದು ವರ್ಷವೂ ಕೂಡ ನಾವೆಲ್ಲೂರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಕೇಜ್ರಿವಾಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT