ಸಂಭ್ರಮಾಚರಣೆಯಲ್ಲಿ ಆಪ್ ಪಕ್ಷ 
ದೇಶ

'ದೆಹಲಿ ಐ ಲವ್ ಯು': ಚುನಾವಣಾ ಗೆಲುವಿನ ಬಳಿಕ ಮತದಾರರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ ಎಲ್ಲ ಮತದಾರರಿಗೂ ನನ್ನ ಆತ್ಮೀಯ ವಂದನೆಗಳು ಎಂದು ಆಪ್ ನಾಯಕ ಆರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ ಎಲ್ಲ ಮತದಾರರಿಗೂ ನನ್ನ ಆತ್ಮೀಯ ವಂದನೆಗಳು ಎಂದು ಆಪ್ ನಾಯಕ ಆರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ದೆಹಲಿಯ ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳಲ್ಲಿ ಆಪ್ ಮುನ್ನಡೆ ಸಾಧಿಸಿದೆ. ಆ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರದ ಗುದ್ದುಗೆಯತ್ತ ಆಪ್ ದಾಪುಗಾಲಿರಿಸಿದ್ದು, ಇದೇ ಖುಷಿಯಲ್ಲಿ ಆಪ್ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿದ ಎಲ್ಲ ಮತದಾರರಿಗೂ ನನ್ನ ಆತ್ಮೀಯ ವಂದನೆಗಳು ಎಂದು ಹೇಳಿದರು.

ಇದು ನಮ್ಮ ಗೆಲುವಲ್ಲ. ದೆಹಲಿ ಜನತೆಯ ಗೆಲುವು. ಅಭಿವೃದ್ದಿಗೆ ಸಿಕ್ಕ ಗೆಲುವು. ದೆಹಲಿ ಜನತೆ ಅಭಿವೃದ್ಧಿಗೆ ತಮ್ಮ ಮತ ನೀಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಅಧಿಕಾರ ನೀಡಿದ್ದಕ್ಕಾಗಿ ದೆಹಲಿಯ ಪ್ರತೀಯೊಬ್ಬ ಮತದಾರನಿಗೂ ನಾನು ತುಂಬು ಹೃದಯದ ಧನ್ಯವಾದ ಹೇಳುತ್ತೇನೆ. ಆಪ್ ಗೆ ಮತ ನೀಡುವ ಮೂಲಕ ದೆಹಲಿ ಜನತೆ ಹೊಸ ಬಗೆಯ ರಾಜಕೀಯಕ್ಕೆ ನಾಂದಿ ಹಾಡಿದ್ದಾರೆ. ರಾಜಕಾರಣದ ರಾಜಕೀಯವಲ್ಲ, ಇದು ಅಭಿವೃದ್ದಿ ಮತ್ತು ಕೆಲಸದ ರಾಜಕೀಯ. ನಾವು ಮಾಡಿದ ಕೆಲಸ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿ ದೆಹಲಿ ಜನತೆ ನಮ್ಮನ್ನು ಆರಿಸಿದ್ದಾರೆ. ಅವರ ಆಶೋತ್ತರಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಮುಂದಿನ ಐದು ವರ್ಷವೂ ಕೂಡ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಅಂತೆಯೇ ಇದೇ ವೇಳೆ ಬಿಜೆಪಿಗೆ ಟಾಂಗ್ ನೀಡಿದ ಕೇಜ್ರಿವಾಲ್, ಈ ಚುನಾವಣೆಯಲ್ಲಿ ಕೇವಲ ಆಪ್ ಮಾತ್ರವಲ್ಲ.. ಭಾರತ ಮಾತೆಯೂ ಜಯಭೇರಿ ಭಾರಿಸಿದ್ದಾಳೆ. ಈ ಹಿಂದಿನ ಐದು ವರ್ಷಗಳಂತೆಯೇ ಮುಂದಿನ ಐದು ವರ್ಷವೂ ಕೂಡ ನಾವೆಲ್ಲೂರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಕೇಜ್ರಿವಾಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT