ಆತ್ಮಹತ್ಯೆಗೆ ಶರಣಾದ ವ್ಯಕ್ತಿ 
ದೇಶ

ಆಂಧ್ರ ಪ್ರದೇಶ: ಕೊರೋನಾ ವೈರಸ್ ಇದೆಯೆಂದು ತಿಳಿದು ಊರನ್ನು ರಕ್ಷಿಸಲು ವ್ಯಕ್ತಿ ಆತ್ಮಹತ್ಯೆ

ತನಗೆ ಕೊರೊನಾ ವೈರಸ್ ಬಂದಿದೆ ಎಂದು ತಿಳಿದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

ಚಿತ್ತೂರ್ :  ತನಗೆ ಕೊರೊನಾ ವೈರಸ್ ಬಂದಿದೆ ಎಂದು ತಿಳಿದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

ಬಾಲಕೃಷ್ಣ(50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಮ್ನಾಯುದಕಂಡ್ರಿಗ ಗ್ರಾಮದ ನಿವಾಸಿಯಾಗಿರುವ ಬಾಲಕೃಷ್ಣ ಹೃದಯ ಬಡಿತದ ಸಮಸ್ಯೆಯಿಂದ ಚಿಕಿತ್ಸೆ ಪಡೆಯಲು ತಿರುಪತಿಯ ರುಯಾ ಆಸ್ಪತ್ರೆಗೆ ತೆರಳಿದ್ದರು.

ವೈದ್ಯರು ಬಾಲಕೃಷ್ಣ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಯಾವುದೋ ವೈರಸ್‍ನ ಲಕ್ಷಣ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಬಾಲಕೃಷ್ಣ ಅವರು ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡೆದಿದ್ದರು.

ಆತನಿಗೆ ವೈದ್ಯರು ಯಾವುದೇ ಸೋಂಕಿನಿಂದ ಪಾರಾಗಲು ಮಾಸ್ಕ್ ಧರಿಸುವಂತೆ ಸೂಚಿಸಿದ್ದರು. ಆದರೆ ತನಗೆ ಕೊರೊನಾ ವೈರಸ್ ಇದೆಯೆಂದು ತಪ್ಪಾಗಿ ತಿಳಿದಿದ್ದ.

ತನಗೆ ಕೊರೊನಾ ವೈರಸ್ ಇದೇ ಹಾಗಾಗಿ ಯಾರೂ ತನ್ನ ಬಳಿ ಬರಬಾರದು ಎಂದು ಊರಿನವರಿಗೆ ಆತ ಹೇಳಿದ್ದ ಎನ್ನಲಾಗಿದೆ. ನಂತರ ತನ್ನಿಂದಾಗಿ ಊರಿಗೆ ವೈರಸ್ ತಗುಲಬಾರದು, ಊರನ್ನು ಕಾಪಾಡಬೇಕು ಎಂದು ತಿಳಿದು ತಾನೇ ಪ್ರಾಣ ತ್ಯಾಗ ಮಾಡಿದ್ದಾನೆ ಎನ್ನಲಾಗಿದೆ.

ಆದರೆ ಆ ವ್ಯಕ್ತಿಗೆ ಕೊರೊನಾ ವೈರಸ್ ಇರಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ಧಾರೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT