ಆತ್ಮಹತ್ಯೆಗೆ ಶರಣಾದ ವ್ಯಕ್ತಿ 
ದೇಶ

ಆಂಧ್ರ ಪ್ರದೇಶ: ಕೊರೋನಾ ವೈರಸ್ ಇದೆಯೆಂದು ತಿಳಿದು ಊರನ್ನು ರಕ್ಷಿಸಲು ವ್ಯಕ್ತಿ ಆತ್ಮಹತ್ಯೆ

ತನಗೆ ಕೊರೊನಾ ವೈರಸ್ ಬಂದಿದೆ ಎಂದು ತಿಳಿದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

ಚಿತ್ತೂರ್ :  ತನಗೆ ಕೊರೊನಾ ವೈರಸ್ ಬಂದಿದೆ ಎಂದು ತಿಳಿದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

ಬಾಲಕೃಷ್ಣ(50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಮ್ನಾಯುದಕಂಡ್ರಿಗ ಗ್ರಾಮದ ನಿವಾಸಿಯಾಗಿರುವ ಬಾಲಕೃಷ್ಣ ಹೃದಯ ಬಡಿತದ ಸಮಸ್ಯೆಯಿಂದ ಚಿಕಿತ್ಸೆ ಪಡೆಯಲು ತಿರುಪತಿಯ ರುಯಾ ಆಸ್ಪತ್ರೆಗೆ ತೆರಳಿದ್ದರು.

ವೈದ್ಯರು ಬಾಲಕೃಷ್ಣ ಅವರ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಯಾವುದೋ ವೈರಸ್‍ನ ಲಕ್ಷಣ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಬಾಲಕೃಷ್ಣ ಅವರು ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡೆದಿದ್ದರು.

ಆತನಿಗೆ ವೈದ್ಯರು ಯಾವುದೇ ಸೋಂಕಿನಿಂದ ಪಾರಾಗಲು ಮಾಸ್ಕ್ ಧರಿಸುವಂತೆ ಸೂಚಿಸಿದ್ದರು. ಆದರೆ ತನಗೆ ಕೊರೊನಾ ವೈರಸ್ ಇದೆಯೆಂದು ತಪ್ಪಾಗಿ ತಿಳಿದಿದ್ದ.

ತನಗೆ ಕೊರೊನಾ ವೈರಸ್ ಇದೇ ಹಾಗಾಗಿ ಯಾರೂ ತನ್ನ ಬಳಿ ಬರಬಾರದು ಎಂದು ಊರಿನವರಿಗೆ ಆತ ಹೇಳಿದ್ದ ಎನ್ನಲಾಗಿದೆ. ನಂತರ ತನ್ನಿಂದಾಗಿ ಊರಿಗೆ ವೈರಸ್ ತಗುಲಬಾರದು, ಊರನ್ನು ಕಾಪಾಡಬೇಕು ಎಂದು ತಿಳಿದು ತಾನೇ ಪ್ರಾಣ ತ್ಯಾಗ ಮಾಡಿದ್ದಾನೆ ಎನ್ನಲಾಗಿದೆ.

ಆದರೆ ಆ ವ್ಯಕ್ತಿಗೆ ಕೊರೊನಾ ವೈರಸ್ ಇರಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ಧಾರೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!