ಸುನೀಲ್ ಆರೋರಾ 
ದೇಶ

ಇವಿಎಂ ತಿರುಚಲು ಸಾಧ್ಯವಿಲ್ಲ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆ ಇಲ್ಲ: ಚುನಾವಣಾ ಆಯುಕ್ತ ಆರೋರಾ

ವಿದ್ಯುನ್ಮಾನ ಮತಯಂತ್ರ(ಇವಿಎಂ)ವನ್ನು ತಿರುಚಲು ಸಾಧ್ಯವಿಲ್ಲ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ಬುಧವಾರ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ವನ್ನು ತಿರುಚಲು ಸಾಧ್ಯವಿಲ್ಲ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಉಪಯೋಗಿಸುವ ಪ್ರಶ್ನೆಯೇ ಬರುವುದಿಲ್ಲ ಎಂದರು. ಇವಿಎಂಗಳ ಬಗ್ಗೆ ದೇಶದಲ್ಲಿ ಬಹಳ ದೊಡ್ಡ ಮಟ್ಟದ ಚರ್ಚೆ, ವಿವಾದ ದೊಡ್ಡಮಟ್ಟದಲ್ಲಿ  ಪ್ರಾರಂಭವಾಗಿರುವಾಗಲೇ ಅವರು ಈ ಸ್ಪಷ್ಟಣೆ ನೀಡಿದ್ದಾರೆ. 

ಮುಂಬರುವ ದಿನಗಳಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಜತೆ ವಿವಿಧ ಚುನಾವಣಾ ಸುಧಾರಣೆ ಮತ್ತು ನೀತಿ ಸಂಹಿತೆ ಕುರಿತು ಚರ್ಚೆ ನಡೆಸಲಿದೆ ಎಂದು ಇಲ್ಲಿ ಹೇಳಿದರು. ದೆಹಲಿಯಲ್ಲಿ ಖಾಸಗಿ ವಾಹಿನಿ ಏರ್ಪಡಿಸಿದ್ದ ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ಇವಿಎಂ ಅನ್ನು ಕಾರು ಅಥವಾ ಪೆನ್ನಿನ ರೀತಿ ಬೇಕಾದಂತೆ ತಿರುಚಲು ಆಗದು ಸಾಧ್ಯವೂ ಇಲ್ಲ.
 
ಹಾಲಿ ಇರುವ ಇವಿಎಂಗಳನ್ನು ಇನ್ನು ಮುಂದಿನ 20 ವರ್ಷಗಳ ಕಾಲ ಉಪಯೋಗ ಮಾಡಬಹುದಾಗಿದೆ ಅಲ್ಲದೇ ಮತ್ತೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ಪ್ರಶ್ನೆಯೂ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT