ಜೈ ಶಂಕರ್ 
ದೇಶ

ರಾಜ್ಯಸಭೆ ಆಯ್ಕೆ ತಕರಾರು: 'ಸುಪ್ರೀಂ'ನಲ್ಲಿ ಕೇವಿಯೆಟ್ ಹಾಕಿದ ಜೈಶಂಕರ್

ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ  ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್  ಹಾಕಿದ್ದಾರೆ.

ನವದೆಹಲಿ: ಕಳೆದ ಜುಲೈನಲ್ಲಿ ಗುಜರಾತ್ ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಯಾವುದೇ ಅರ್ಜಿಯನ್ನು ವಿಚಾರಣೆಗೆ  ನ್ಯಾಯಾಲಯ ನಿರ್ಧರಿಸಿದರೆ ತಮ್ಮ ಅಭಿಪ್ರಾಯ ಅಹವಾಲು ಕೇಳದೆ ಯಾವ ತೀರ್ಮಾನಕ್ಕೆ ಬರಬಾರದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯೆಟ್  ಹಾಕಿದ್ದಾರೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಅವರು ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಬಹುದಾದ ಮನವಿಗಳ ಕುರಿತು ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ನೀಡುವ ಮೊದಲು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಲಾಗಿದೆ.

ಡಾ.ಜೈಶಂಕರ್ ಅವರ ಚುನಾವಣೆ ಆಯ್ಕೆ  ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗೌರವ್ ಪಾಂಡ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು 2020 ರ ಫೆಬ್ರವರಿ 4 ರಂದು ಗುಜರಾತ್ ಹೈಕೋರ್ಟ್ ವಜಾಗೊಳಿಸಿ ಅರ್ಜಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ತಿಳಿಸಿತ್ತು.

ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಸಭೆ  ಸ್ಥಾನಗಳಿಗೆ ಪ್ರತ್ಯೇಕ ಮತದಾನ ನಡೆಸುವ ಆಯೋಗದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನಿಸಿ ಚುನಾವಣೆಗಳನ್ನು ಒಟ್ಟಾಗಿ ನಡೆಸಬೇಕೆಂದು ಮನವಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT