ನರೇಶ್ ಯಾದವ್ 
ದೇಶ

ಆಪ್ ಶಾಸಕ ನರೇಶ್ ಯಾದವ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: ಓರ್ವ ಸಾವು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಸಮಯದಲ್ಲಿಯೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಸಮಯದಲ್ಲಿಯೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ಮಹರೌಲಿ ಶಾಸಕ ನರೇಶ್ ಮತ್ತು ಆತನ ಬೆಂಬಲಿಗರು ತಮ್ಮ ಚುನಾವಣಾ ಕ್ಷೇತ್ರದಲ್ಲಿರುವ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ ಹಿಂದಿರುಗುತ್ತಿದ್ದರು. ಈ ವೇಳೆ ನೈಋತ್ಯ ದೆಹಲಿಯ ಕೃಷ್ಣಾಗಡ್ ಗ್ರಾಮದಲ್ಲಿ ಶಾಸಕರು ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು 7 ಸುತ್ತು ಗುಂಡು ಹಾರಿಸಿದ್ದಾರೆ. 

ಪರಿಣಾಮ ದಾಳಿಯಲ್ಲಿ ಓರ್ವ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಪಕ್ಷದ ಕಾರ್ಯಕರ್ತ ಅಶೋಕ್ ಮನ್ ಎಂದು ಹೇಳಲಾಗುತ್ತಿದೆ. 

ಪ್ರಕರಣ ಸಂಬಂಧ ಹೇಳಿಕ ನೀಡಿರುವ ದೆಹಲಿ ಪೊಲೀಸರು ದಾಳಿಕೋರರು ಶಾಸಕರನ್ನು ಗುರಿ ಮಾಡಿರಿಲಿಲ್ಲ. ಉದ್ದೇಶ ಪೂರ್ವಕವಾಗಿಯೇ ಸಾವನ್ನಪ್ಪಿದ ವ್ಯಕ್ತಿಯನ್ನು ಗುರಿ ಮಾಡಿ ದಾಳಿ ನಡೆಸಿದ್ದಾರೆಂದು ಹೇಳಿದ್ದಾರೆ. 

ನರೇಶ್ ಯಾದವ್ ದಾಳಿಕೋರರ ಗುರಿಯಾಗಿರಲಿಲ್ಲ. ಸಾವನ್ನಪ್ಪಿದ ವ್ಯಕ್ತಿಯೇ ಅವರ ಗುರಿಯಾಗಿದ್ದ ಎಂದು ಡಿಸಿಪಿ ಇಂಗಿತ್ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT