ಘನ ಉದ್ದೇಶಕ್ಕಾಗಿ ಮನೆಯನ್ನು ದಾನ ಮಾಡಿದ ಎಸ್ ಪಿ ಬಾಲಸುಬ್ರಹ್ಮಣ್ಯಂ! 
ದೇಶ

ಘನ ಉದ್ದೇಶಕ್ಕಾಗಿ ಮನೆಯನ್ನು ದಾನ ಮಾಡಿದ ಎಸ್ ಪಿ ಬಾಲಸುಬ್ರಹ್ಮಣ್ಯಂ!

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಉದಾತ್ತ ಉದ್ದೇಶಕ್ಕಾಗಿ ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ದಾನ ಮಾಡಿದ್ದಾರೆ. 

ನೆಲ್ಲೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಉದಾತ್ತ ಉದ್ದೇಶಕ್ಕಾಗಿ ತಮ್ಮ ಪಿತ್ರಾರ್ಜಿತ ಆಸ್ತಿಯನ್ನು ದಾನ ಮಾಡಿದ್ದಾರೆ. 

ನೆಲ್ಲೂರಿನ ತಿಪ್ಪರಾಜುವಾರಿ ರಸ್ತೆಯಲ್ಲಿರುವ ತಮ್ಮ ಪಿತ್ರಾರ್ಜಿತ ಮನೆಯನ್ನು ಕಂಚಿ ಕಾಮಕೋಟಿ ಪೀಠಕ್ಕೆ ಹಸ್ತಾಂತರಿಸಿದ್ದಾರೆ. ಧಾರ್ಮಿಕ ಚಿಂತನೆಗಳಲ್ಲಿ ಶ್ರದ್ಧೆ ಹೊಂದಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಪಿತ್ರಾರ್ಜಿತ ಮನೆಯನ್ನು ಸಂಸ್ಕೃತ ಹಾಗೂ ವೇದ ಪಾಠಶಾಲೆ ಆರಂಭಿಸುವುದಕ್ಕೆ ನೀಡಿದ್ದಾರೆ. 

ಈ ಉದ್ದೇಶಕ್ಕಾಗಿ ತಮ್ಮ ಮನೆಯನ್ನು ಹಸ್ತಾಂತರಿಸುವುದಾಗಿ ಎಸ್ ಪಿಬಿ ಘೋಷಿಸಿದ್ದರು. ಅದರಂತೆಯೇ ನಡೆದಿದ್ದು, ನೆಲ್ಲೂರಿನಲ್ಲಿ ಕಂಚಿ ಕಾಮಕೋಟಿ ಪೀಠದ ವಿಜಯೇಂದ್ರ ಸರಸ್ವತಿ ಸ್ವಾಮಿಗಳಿಗೆ ಹಸ್ತಾಂತರಿಸಿದ್ದಾರೆ. 

ದಕ್ಷಿಣ ಭಾರತದಾದ್ಯಂತ 1000 ಕ್ಕೂ ಹೆಚ್ಚು ಹಾಡುಗಳನ್ನು ಎಸ್ ಪಿಬಿ ಹಾಡಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ 6 ನ್ಯಾಷನಲ್ ಫಿಲ್ಮ್ ಪ್ರಶಸ್ತಿಗಳು ಎಸ್ ಪಿಬಿ ಅವರನ್ನು ಅರಸಿ ಬಂದಿದೆ.

ಚೆನ್ನೈ ನಲ್ಲಿ ನೆಲೆಸಿರುವ ಎಸ್ ಪಿಬಿ ಅವರ ಪಿತ್ರಾರ್ಜಿತ ಮನೆಯನ್ನು ವಾಣಿಜ್ಯೋದ್ದೇಶಗಳಿಗೆ ಬಳಕೆ ಮಾಡಲು ಹಲವಾರು ಅವಕಾಶಗಳು ಬಂದಿದ್ದರೂ ಸಹ ಅದನ್ನು ಲೆಕ್ಕಿಸದೇ ಘನ ಉದ್ದೇಶಕ್ಕಾಗಿ ದಾನ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT