ಗೋಲಿ ಮಾರೋ..., ಭಾರತ-ಪಾಕ್ ಪಂದ್ಯಗಳಂತಹ ಹೇಳಿಕೆ ನೀಡಬಾರದಿತ್ತು: ದೆಹಲಿ ಚುನಾವಣೆ ಸೋಲಿನ ಬಗ್ಗೆ ಶಾ 
ದೇಶ

ಗೋಲಿ ಮಾರೋ.., ಭಾರತ-ಪಾಕ್ ಪಂದ್ಯ ಹೇಳಿಕೆಗಳನ್ನು ನೀಡಬಾರದಿತ್ತು: ದೆಹಲಿ ಚುನಾವಣೆ ಸೋಲಿನ ಬಗ್ಗೆ ಅಮಿತ್ ಶಾ

ದೆಹಲಿ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ನಾಯಕ, ಗೃಹ ಸಚಿವ ಅಮಿತ್ ಶಾ ಮೌನ ಮುರಿದಿದ್ದಾರೆ. 

ನವದೆಹಲಿ: ದೆಹಲಿ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ನಾಯಕ, ಗೃಹ ಸಚಿವ ಅಮಿತ್ ಶಾ ಮೌನ ಮುರಿದಿದ್ದಾರೆ. 

ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ನಾಯಕರು ಗೋಲಿ ಮಾರೋ...., ಭಾರತ-ಪಾಕ್ ಪಂದ್ಯಗಳಂತಹ ದ್ವೇಷಪೂರಿತ ಘೋಷಣೆ, ಹೇಳಿಕೆಗಳನ್ನು ನೀಡಬಾರದಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ. ಈ ರೀತಿಯ ಘೋಷಣೆಗಳು, ಹೇಳಿಕೆಗಳಿಂದ ದೆಹಲಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯುಂಟಾಗಿರಬಹುದು ಎಂದು ಟೈಮ್ಸ್ ನೌ ಕಾರ್ಯಕ್ರಮದಲ್ಲಿ ಮಾತನಾಡಿರುವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ. 

ಆದರೆ ಬಿಜೆಪಿ ಕೇವಲ ಸೋಲು ಗೆಲುವುಗಳಿಗಾಗಿ ಚುನಾವಣೆ ಎದುರಿಸುವುದಿಲ್ಲ. ಚುನಾವಣೆಯ ಮೂಲಕ ತನ್ನ ಸಿದ್ಧಾಂತವನ್ನು ವಿಸ್ತರಿಸುವುದರಲ್ಲಿ ಬಿಜೆಪಿ ನಂಬಿಕೆಯನ್ನು ಹೊಂದಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.ದೆಹಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷದ ಕೆಲವು ನಾಯಕರಿಂದ ಬಂದ ಗೋಲಿ ಮಾರೋ... ಇಂಡೋ-ಪಾಕ್ ಪಂದ್ಯಗಳಂತಹ ಹೇಳಿಕೆಗಳಿಂದ ಪಕ್ಷ ಅಂತರ ಕಾಯ್ದುಕೊಂಡಿತ್ತು. 

ದೆಹಲಿ ಚುನಾವಣಾ ಫಲಿತಾಂಶ ಸಿಎಎ ಹಾಗೂ ಎನ್ ಆರ್ ಸಿ ಕುರಿತ ಜನಾದೇಶವಲ್ಲ. ತಮ್ಮ ಜೊತೆ ಸಿಎಎ ಕುರಿತು ಚರ್ಚೆ ನಡೆಸಬೇಕೆಂದಿರುವವರು ತಮ್ಮ ಕಚೇರಿಯನ್ನು ಸಂಪರ್ಕಿಸಿ ಸಮಯವನ್ನು ಕೇಳಬಹುದೆಂದು ಅಮಿತ್ ಶಾ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT