ಪಿ ಚಿದಂಬರಂ-ಕಾರ್ತಿ ಚಿದಂಬರಂ(ಸಂಗ್ರಹ ಚಿತ್ರ) 
ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ವಸ್ತುಸ್ಥಿತಿ ವರದಿ ಸಲ್ಲಿಸಿದ ಸಿಬಿಐ, ಇಡಿ, ವಿಚಾರಣೆ ಫೆ.20ಕ್ಕೆ ಮುಂದೂಡಿಕೆ 

ಮಾಜಿ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಭಾಗಿಯಾಗಿದ್ದಾರೆ ಎನ್ನಲಾಗುವ ಏರ್ ಸೆಲ್ -ಮ್ಯಾಕ್ಸಿಸ್ ಕೇಸಿನ ವಸ್ತುಸ್ಥಿತಿ ವರದಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಮುಂದೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಲ್ಲಿಸಿವೆ.

ನವದೆಹಲಿ: ಮಾಜಿ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಭಾಗಿಯಾಗಿದ್ದಾರೆ ಎನ್ನಲಾಗುವ ಏರ್ ಸೆಲ್ -ಮ್ಯಾಕ್ಸಿಸ್ ಕೇಸಿನ ವಸ್ತುಸ್ಥಿತಿ ವರದಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಮುಂದೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಲ್ಲಿಸಿವೆ.


ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಜಾರಿ ನಿರ್ದೇಶನಾಲಯ, ಪ್ರಕರಣ ಕುರಿತು ತನಿಖೆ ಚುರುಕಾಗಿ ಮುಂದುವರಿದಿದೆ ಎಂದು ಹೇಳಿದೆ. ಲೆಟರ್ಸ್ ರೊಗೆಟರಿ(ಎಲ್ ಆರ್)ನ್ನು ಮಲೇಷಿಯಾಕ್ಕೆ ಕಳುಹಿಸಲಾಗಿದ್ದು ಅಲ್ಲಿಂದ ವರದಿ ಬರಲು ಕಾಯುತ್ತಿದ್ದೇವೆ ಎಂದು ಸಿಬಿಐ ಹೇಳಿದೆ.ವಿದೇಶಿ ಕೋರ್ಟ್ ನಿಂದ ನ್ಯಾಯಾಂಗ ತನಿಖೆಗೆ ಔಪಚಾರಿಕವಾಗಿ ನೆರವು ಕೇಳುವುದಕ್ಕೆ ಲೆಟರ್ಸ್ ರೊಗೆಟರಿ ಎಂದು ಕರೆಯುತ್ತೇವೆ. 


ಇಂದು ವಸ್ತುಸ್ಥಿತಿ ವರದಿ ಸಲ್ಲಿಕೆಯಾದ ನಂತರ ದೆಹಲಿ ಕೋರ್ಟ್ ನ ಜಿಲ್ಲಾ ನ್ಯಾಯಾಧೀಶೆ ಸುಜಾತಾ ಕೊಹ್ಲಿ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದರು. ಕಳೆದ ಜನವರಿ 31ರಂದು ಕೋರ್ಟ್ ಎರಡೂ ತನಿಖಾ ತಂಡಗಳಿಗೆ ಎರಡು ವಾರಗಳೊಳಗೆ ವಿಚಾರಣೆಯ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT