ಎರ್ಡೊಗನ್ 
ದೇಶ

ಕಾಶ್ಮೀರ ವಿಚಾರ: ಟರ್ಕಿ ಅಧ್ಯಕ್ಷರ ಹೇಳಿಕೆ ತಿರಸ್ಕರಿಸಿದ ಭಾರತ, ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು

ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ. 

ನವದೆಹಲಿ:  ಕಾಶ್ಮೀರ ವಿಚಾರ ಕುರಿತಂತೆ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ನೀಡಿರುವ ಹೇಳಿಕೆಯನ್ನು ಭಾರತ ತಿರಸ್ಕರಿಸಿದೆ. ಭಾರತದ ಆಂತರಿಕ ವ್ಯವಹಾರದಲ್ಲಿ ತಲೆಹಾಕದಂತೆ ತಿರುಗೇಟು ನೀಡಿದೆ. 

ಜಮ್ಮು-ಕಾಶ್ಮೀರ ಕುರಿತು ಟರ್ಕಿ ಅಧ್ಯಕ್ಷರು ನೀಡಿರುವ ಎಲ್ಲಾ ಹೇಳಿಕೆಗಳನ್ನು ಭಾರತ ತಿರಸ್ಕರಿಸಿದೆ. ಈ ಪ್ರದೇಶ ಭಾರತದ ಅವಿಭಾಜ್ಯ ಹಾಗೂ ನಾಶಪಡಿಸಲಾಗದ ಭಾಗವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. 

ಪಾಕಿಸ್ತಾನ ಸಂಸತ್ತಿನಲ್ಲಿ ಶುಕ್ರವಾರ ಮಾತನಾಡಿದ ಟರ್ಕಿ ಅಧ್ಯಕ್ಷ ಎರ್ಡೋಗನ್, ಮೊದಲನೆಯ ಮಹಾಯುದ್ಧದ ಸಮಯದಲ್ಲಿ ವಿದೇಶಿ ಪ್ರಾಬಲ್ಯದ ವಿರುದ್ಧ ಟರ್ಕಿಶ್ ಜನರು ನಡೆಸಿದ ಹೋರಾಟದೊಂದಿಗೆ ಕಾಶ್ಮೀರಿ ಜನರ ಹೋರಾಟ ವನ್ನು ಹೋಲಿಕೆ ಮಾಡಿದ್ದರು. 

"ಪಾಕಿಸ್ತಾನದಿಂದ  ಭಾರತದ ಮೇಲೆ  ಉಂಟಾಗುತ್ತಿರುವ ಭಯೋತ್ಪಾದನೆ ಬೆದರಿಕೆ ಮತ್ತಿತರ ನೈಜ ಅಂಶಗಳನ್ನು ಅರ್ಥಮಾಡಿಕೊಳ್ಳದೆ ಭಾರತದ ಆಂತರಿಕ ವ್ಯವಹಾರದಲ್ಲಿ ತಲೆ ಹಾಕದಂತೆ ಟರ್ಕಿ ನಾಯಕರಿಗೆ ಹೇಳಲು ಬಯಸುತ್ತೇವೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT