ಸಂಗ್ರಹ ಚಿತ್ರ 
ದೇಶ

ಮದುವೆ ಸಂಭ್ರಮಕ್ಕಾಗಿ ಹಾಕಿದ್ದ ಡಿಜೆ ಸಂಗೀತ ಕೇಳಿದ ಮದುಮಗ ಕುಸಿದು ಬಿದ್ದು ಸಾವು!

ಮದುವೆ ಸಂಭ್ರಮಕ್ಕೆಂದು ಹಾಕಿದ್ದ ಡಿಜೆ ಮ್ಯೂಸಿಕ್ ಯುವಕನ ಜೀವವನ್ನೇ ಬಲಿ ಪಡೆದಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದೆ. ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದ 'ಬರಾತ್' ನಲ್ಲಿ ಡಿಜೆ ಸಂಗೀತ ಹೈಪಿಚ್ ನಿಂದಾಗಿ ಮದುಮಗಹೃದಯ ಸ್ಥಂಭನಗೊಂಡು ಪ್ರಾಣ ಬಿಟ್ಟಿದ್ದಾನೆ. ಅದೂ ಕೂಡ ಮದುಮಗನೇ ಹೀಗೆ ಸಾವನ್ನಪ್ಪಿರುವುದು ಎರಡೂ ಕುಟುಂಬದವರಿಗೆ ತೀವ್ರ ಆಘಾತ ತಂದಿದೆ.

ಹೈದರಾಬಾದ್: ಮದುವೆ ಸಂಭ್ರಮಕ್ಕೆಂದು ಹಾಕಿದ್ದ ಡಿಜೆ ಮ್ಯೂಸಿಕ್ ಯುವಕನ ಜೀವವನ್ನೇ ಬಲಿ ಪಡೆದಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ನಲ್ಲಿ ನಡೆದಿದೆ. ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದ 'ಬರಾತ್' ನಲ್ಲಿ ಡಿಜೆ ಸಂಗೀತ ಹೈಪಿಚ್ ನಿಂದಾಗಿ ಮದುಮಗಹೃದಯ ಸ್ಥಂಭನಗೊಂಡು ಪ್ರಾಣ ಬಿಟ್ಟಿದ್ದಾನೆ. ಅದೂ ಕೂಡ ಮದುಮಗನೇ ಹೀಗೆ ಸಾವನ್ನಪ್ಪಿರುವುದು ಎರಡೂ ಕುಟುಂಬದವರಿಗೆ ತೀವ್ರ ಆಘಾತ ತಂದಿದೆ.

ಮದುವೆಯಾದ ಕೆಲವೇ ಗಂಟೆಗಳ ನಂತರ ಎಂ.ಗಣೇಶ್ ಹೃದಯ ಸ್ಥಂಭನದಿಂದ ಕುಸಿದು ಬಿದ್ದಿದ್ದಾನೆ. ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಹೃದಯ ಸ್ತಂಭನದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಹೈದರಾಬಾದ್‌ನಿಂದ 200 ಕಿ.ಮೀ ದೂರದಲ್ಲಿರುವ ಬೋಧನ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮದುವೆ ಸಮಾರಂಭ ನಡೆದ ಮರುದಿನ ಗಣೇಶ್ ಅವರ ಕುಟುಂಬ ಸದಸ್ಯರು 'ಬರಾತ್' ಕಾರ್ಯಕ್ರಮಕ್ಕೆ ತೊಡಗಿದ್ದರು.ಆ ವೇಳೆ ಡಿಜೆ ಸದ್ದು  ಹೆಚ್ಚಿನ ಡೆಸಿಬೆಲ್ ನಿಂದ ಕೂಡಿತ್ತು. ಇದರಿಂದ ಮದುಮಗ ಅಚಾನಕ್ ಆಗಿ ಆಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದನು ಎಂದು ಕುಟುಂಬ ಮೂಲದವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

ಗರ್ಭಕೋಶವನ್ನೇ ಕೈಯಿಂದ ಕಿತ್ತು ಬಿಸಾಕೋಣ ಅನಿಸಿತ್ತು; ವಿಪರೀತ ಮೂಡ್ ಸ್ವಿಂಗ್ಸ್: 'ಆ' ದಿನಗಳ ಭೀಕರತೆ ಬಿಚ್ಚಿಟ್ಟ ನಟಿ ಐಶ್ವರ್ಯಾ!

Video: ಅಭಿಮಾನಿ ಎಸೆದ ಹೂವಿನ ಚೆಂಡನ್ನು ಬಾಂಬ್ ಎಂದು ಭಾವಿಸಿ ಹೆದರಿ ಓಡಿದ Thalapathy Vijay?

ಮಹಿಳಾ ಮೀಸಲಾತಿ ಕುರಿತ ಚರ್ಚೆ: ಏ.15 ಕ್ಕೆ ಎಲ್ಲಾ ವಿರೋಧ ಪಕ್ಷಗಳ ಸಭೆ- ಮಲ್ಲಿಕಾರ್ಜುನ ಖರ್ಗೆ

SCROLL FOR NEXT