ನಿರ್ಭಯಾ ಅಪರಾಧಿಗಳು 
ದೇಶ

ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ವಿಚಾರಣಾ ನ್ಯಾಯಾಲಯ ಹೊಸ ದಿನಾಂಕ ಪ್ರಕಟಿಸಬಹುದು: ಸುಪ್ರೀಂ ಕೋರ್ಟ್ 

ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಹೊಸ ದಿನಾಂಕ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಹೊಸ ದಿನಾಂಕ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸುವ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಿನ್ನೆ ನಡೆಸಿದ ಸುಪ್ರೀಂ ಕೋರ್ಟ್, ಅಪರಾಧಿಗಳ ಯಾವುದೇ ಮನವಿಗಳು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಉಳಿದಿಲ್ಲದಿರುವುದರಿಂದ ಮತ್ತು ನಾಲ್ವರಲ್ಲಿ ಮೂವರ ಕ್ಷಮಾದಾನ ಅರ್ಜಿಗಳನ್ನು ರಾಷ್ಟ್ರಪತಿಗಳು ತಿರಸ್ಕರಿಸಿರುವುದರಿಂದ ನಾಲ್ಕನೇ ಅಪರಾಧಿ ಕ್ಷಮಾದಾನ ಅರ್ಜಿಯನ್ನು ಇನ್ನೂ ಸಲ್ಲಿಸದಿರುವುದರಿಂದ ಗಲ್ಲುಶಿಕ್ಷೆಗೆ ವಿಚಾರಣಾಧೀನ ನ್ಯಾಯಾಲಯ ಹೊಸ ದಿನಾಂಕವನ್ನು ನಿಗದಿಪಡಿಸಬಹುದು ಎಂದು ಹೇಳಿದೆ.


ನ್ಯಾಯಮೂರ್ತಿಗಳಾದ ಆರ್ ಭಾನುಮತಿ, ಅಶೋಕ್ ಭೂಷಣ್, ಎ ಎಸ್ ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ, ದೆಹಲಿ ಸರ್ಕಾರದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ ಮನವಿಯನ್ನು ಪಟ್ಟಿ ಮಾಡಿತು. ದೆಹಲಿ ಹೈಕೋರ್ಟ್ ಫೆಬ್ರವರಿ 17ರಂದು ನಾಲ್ವರು ಅಪರಾಧಿಗಳಿಗೆ ನೀಡಲಾಗಿದ್ದ ಗಲ್ಲುಶಿಕ್ಷೆ ದಿನಾಂಕಕ್ಕೆ ತಡೆನೀಡಲು ನಿರಾಕರಿಸಿತ್ತು.


ಅಪರಾಧಿಗಳ ಕ್ಷಮಾದಾನ ಅರ್ಜಿ ವಿಚಾರಣೆ ಬಾಕಿ ಉಳಿದಿರುವುದನ್ನು ವಿಚಾರಣಾ ನ್ಯಾಯಾಲಯ ತನ್ನ ಪ್ರಕ್ರಿಯೆಗೆ ಅಡಚಣೆ ಎಂದು ಭಾವಿಸಬೇಕಾಗಿಲ್ಲ ಎಂದು ಕೂಡ ಕೋರ್ಟ್ ಹೇಳಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT