ಸ್ವಾಮಿ ಚಕ್ರಪಾಣಿ 
ದೇಶ

ಕೊರೋನಾ ವೈರಸ್: ಮಾಂಸಾಹಾರಿಗಳನ್ನು ಶಿಕ್ಷಿಸಲು ಬಂದಿರುವ 'ರೌದ್ರವತಾರ'-ಹಿಂದೂ ಮಹಾಸಭಾ

ವಿಶ್ವದಾದ್ಯಂತ ಭೀತಿಯನ್ನು ಸೃಷ್ಟಿಸಿರುವ ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಗೆ ಮದ್ದು ಕಂಡುಹಿಡಿಯಲು ವಿಜ್ಞಾನಿ ಸಮುದಾಯ ತಲೆಕೆಡಿಸಿಕೊಂಡಿದ್ದರೆ ಇತ್ತ ಹಿಂದೂ ಮಹಾಸಭಾ ಮಾಂಸಾಹಾರಿಗಳನ್ನು ಶಿಕ್ಷಿಸಲು ಬಂದಿರುವ ರೌದ್ರವತಾರ ಎನ್ನುತ್ತಿದೆ.

ನವದೆಹಲಿ: ವಿಶ್ವದಾದ್ಯಂತ ಭೀತಿಯನ್ನು ಸೃಷ್ಟಿಸಿರುವ ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಗೆ ಮದ್ದು ಕಂಡುಹಿಡಿಯಲು ವಿಜ್ಞಾನಿ ಸಮುದಾಯ ತಲೆಕೆಡಿಸಿಕೊಂಡಿದ್ದರೆ ಇತ್ತ ಹಿಂದೂ ಮಹಾಸಭಾ ಮಾಂಸಾಹಾರಿಗಳನ್ನು ಶಿಕ್ಷಿಸಲು ಬಂದಿರುವ ರೌದ್ರವತಾರ ಎನ್ನುತ್ತಿದೆ.

ಕೊರೋನಾ ಇದು ವೈರಸ್ ಅಲ್ಲ, ಆದರೆ, ಕೀಳು ಅಭಿರುಚಿಯನ್ನು ತಡೆಯಲು ಬಂದಿರುವ ಅವತಾರ. ಮಾಂಸಾಹಾರಿಗಳನ್ನು ಶಿಕ್ಷಿಸಲು ಹಾಗೂ ಮರಣದ ಸಂದೇಶ ನೀಡಲು ಬಂದಿರುವ ಅವತಾರ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ನಂಬಿದರೆ ನಂಬಿ, ಬಿಟ್ರೆ ಬಿಡಿ, ನರಸಿಂಹ ರಾಕ್ಷಸನನ್ನು ಕೊಲಲ್ಲು ಅವತಾರ ಎತ್ತಿದ್ದಂತೆ ಚೀನಾದವರು ಪ್ರಾಣಿ ಹಿಂಸೆ ಮಾಡದೆ ಸಸ್ಯಾಹಾರಿಗಳಾಗಿ ಬದಲಾಗಲು ಇದೊಂದು ಪಾಠವಾಗಲಿದೆ ಎಂದು ಅವರು ಹೇಳಿದ್ದಾರೆ.

 ಈ ಆರೋಗ್ಯಕರ ಸಾಂಕ್ರಾಮಿಕ ರೋಗದಿಂದ ಹೊರಬರಲು ಚೀನಾದವರಿಗೆ ಒಂದು ಪರ್ಯಾಯ ಮಾರ್ಗವನ್ನು ಅವರು ತಿಳಿಸಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್  ಕೊರೋನಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಎಲ್ಲಾ ಮಾಂಸಾಹಾರಿಗಳು ಮುಂದೆ ಈ  ಅಮಾಯಕ ಪ್ರಾಣಿಗಳನ್ನು ಕೊಲ್ಲುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ತಪ್ಪಾಯಿತು ಎಂದು ಬೇಡಿಕೊಂಡರೆ ಕೊರೋನಾದ ಕೋಪ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. 

ಆದಾಗ್ಯೂ, ಭಾರತೀಯರು ಈ ಮಾರಣಾಂತಿಕ ಸಾಂಕ್ರಾಮಿಕ ರೋಗದಿಂದ ಭಯಪಡಬೇಕಾಗಿಲ್ಲ. ದೇವರನ್ನು ಪೂಜಿಸುವ ಹಾಗೂ ಗೋ ರಕ್ಷಣೆಯಲ್ಲಿ ನಂಬಿಕೆ ಹೊಂದಿರುವ ಭಾರತೀಯರಲ್ಲಿ ಕೊರೋನಾ ವೈರಸ್ ನಿಂದ ಪ್ರತಿ ರಕ್ಷಣೆ ಪಡೆಯುವ ಶಕ್ತಿ ಹೆಚ್ಚಿದೆ ಎಂದು ಹಿಂದೂ ಮಹಾಸಭಾ ಮುಖ್ಯಸ್ಥರು ಧೈರ್ಯ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT