ದೀನ್ ದಯಾಳ್ ಉಪಾಧ್ಯಾಯ ಪ್ರತಿಮೆ, ಪ್ರಧಾನಿ ಮೋದಿ 
ದೇಶ

ವಾರಾಣಸಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪುತ್ಹಳಿ ಅನಾವರಣಗೊಳಿಸಿದ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿಂದು 63 ಅಡಿ ಎತ್ತರದ ಮಾಜಿ ಭಾರತೀಯ ಜನ ಸಂಘ ನಾಯಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುತ್ಹಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿಂದು 63 ಅಡಿ ಎತ್ತರದ ಮಾಜಿ ಭಾರತೀಯ ಜನ ಸಂಘ ನಾಯಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುತ್ಹಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.

ಪಂಚ ಲೋಹದಿಂದ  ಈ ಪುತ್ಹಳಿಯನ್ನು ನಿರ್ಮಿಸಲಾಗಿದ್ದು, ಇದು ದೇಶದಲ್ಲಿಯೇ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಎತ್ತರದ ಪ್ರತಿಮೆಯಾಗಿದೆ. ಸುಮಾರು 200 ಶಿಲ್ಪಿಗಳು ಒಂದು ವರ್ಷಗಳ ಕಾಲ ಶ್ರಮ ವಹಿಸಿ ಈ ಪ್ರತಿಮೆಯನ್ನು ಪೂರ್ಣಗೊಳಿಸಿದ್ದಾರೆ.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕ ಕೇಂದ್ರವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸ್ಮಾರಕ ದೀನ್ ದಯಾಳ್ ಉಪಾಧ್ಯಾಯ ಅವರ ಬದುಕು ಮತ್ತು ಜೀವನದ ಬಗ್ಗೆ ಬೆಳಕು ಚೆಲ್ಲಲಿದೆ. 30 ಒಡಿಶಾದ ಕುಶಲ ಕರ್ಮಿಗಳು ಈ ಸ್ಮಾರಕ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.

ಇಂದು ಬೆಳಗ್ಗೆ ವಾರಾಣಸಿಗೆ ಆಗಮಿಸಿದ ಪ್ರಧಾನಿ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ  430 ಹಾಸಿಗೆ ಸಾಮರ್ಥ್ಯದ ಸೂಪರ್  ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ, 74 ಹಾಸಿಗೆ ಮಾನಸಿಕ ಆರೋಗ್ಯ ಆಸ್ಪತ್ರೆ, ವಸ್ತು ಪ್ರದರ್ಶನ, ಮಹಾ ಕಾಲ್ ಎಕ್ಸ್ ಪ್ರೆಸ್ ಗೆ ಚಾಲನೆ ಸೇರಿದಂತೆ ಸುಮಾರು 30 ಯೋಜನೆಗಳನ್ನು ಉದ್ಘಾಟಿಸಿದರು, 

ಮಹಾಕಾಲ್ ಎಕ್ಸ್ ಪ್ರೆಸ್  ಮೂರು ಜ್ಯೋತಿರ್ಲಿಂಗ ಕೇಂದ್ರಗಳಾದ ವಾರಾಣಸಿ, ಉಜ್ಜೈನಿ ಮತ್ತು ಓಂಕಾರೇಶ್ವರವನ್ನು ಸಂಪರ್ಕಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT