ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ 
ದೇಶ

ಸಿಎಎ ವಿರುದ್ಧ ನಿರ್ಣಯಕ್ಕೆ ಮುಂದಾದ ತೆಲಂಗಾಣ ಸರ್ಕಾರ

ದೇಶದ ನಾಲ್ಕು ಬಿಜೆಪಿಯೇತರ ರಾಜ್ಯಗಳ ಬಳಿಕ ಇದೀಗ ತೆಲಂಗಾಣ ಸರ್ಕಾರದ ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿಂತಿದ್ದು, ಕಾಯ್ದೆ ವಿರುದ್ಧ ತನ್ನ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ಹೈದರಾಬಾದ್: ದೇಶದ ನಾಲ್ಕು ಬಿಜೆಪಿಯೇತರ ರಾಜ್ಯಗಳ ಬಳಿಕ ಇದೀಗ ತೆಲಂಗಾಣ ಸರ್ಕಾರದ ಕೂಡ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿಂತಿದ್ದು, ಕಾಯ್ದೆ ವಿರುದ್ಧ ತನ್ನ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

ತೆಲಂಗಾಣ ರಾಜ್ಯ ವಿಧಾನಸಭೆಯಲ್ಲಿ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದ ವೇಳೆ ವಿರೋಧ ಪಕ್ಷ ಬಿಜೆಪಿ ನಾಯಕರು ಆಡಳಿತಾರೂಢ ಟಿಆರ್ಎಸ್ ಪಕ್ಷಕ್ಕೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಪೌರತ್ವ ಕಾಯ್ದೆ ವಿರುದ್ಧ ದೇಶದಾದ್ಯಂತ ವಿರೋಧ ವ್ಯಕ್ತಪಡಿಸುತ್ತಿದ್ದರೂ, ರಾಜ್ಯ ಸರ್ಕಾರ ಮಾತ್ರ ತುಟಿಬಿಚ್ಚುತ್ತಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಇದೀಗ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಮುಂದಿನ ಸಚಿವ ಸಂಪುಟದಲ್ಲಿ ಕಾಯ್ದೆ ವಿರುದ್ಧ ನಿರ್ಣಯಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ. 

ತೆಲಂಗಾಣದ ಪ್ರಗತಿ ಭವನದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನೇತೃತ್ವದಲ್ಲಿ ಶೀಘ್ರದಲ್ಲಿಯೇ ಸಂಪುಟ ಸಭೆ ನಡೆಯಲಿದೆ. ಧರ್ಮದ ಆಧಾರದ ಮೇಲೆ ಜನರನ್ನು ತಾರತಮ್ಯ ಮಾಡಬೇಡಿ. ಕಾನೂನಿನ ಪ್ರಕಾರ ಪ್ರತೀಯೊಬ್ಬರನ್ನು ಸಮಾನಾಗಿ ನೋಡಬೇಕು. ಹೀಗಾಗಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಕೇಂದ್ರದ ಬಿಜೆಪಿಗೆ ಟಿಆರ್ಎಸ್ ನಾಯಕರು ಮನವಿ ಮಾಡಿಕೊಂಡಿದ್ದಾರೆ. 

ಕೆಲ ತಿಂಗಳ ಹಿಂದಷ್ಟೇ ತೆಲಂಗಾಣ ರಾಜ್ಯ ಮುಖ್ಯಂತ್ರಿಗಳು ಸ್ಥಲೀಯ ಪಕ್ಷಗಳು ಹಾಗೂ ಇತರೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಸೂದೆ ಕುರಿತು ಈ ವೇಳೆ ವಿರೋಧಗಳು ವ್ಯಕ್ತವಾಗಿದೆ. ಹೀಗಾಗಿಯೇ ಈ ರೀತಿಯ ನಿರ್ಣಯ ಕೈಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT