ಸಹಜಾನಂದ ಮಹಿಳಾ ಕಾಲೇಜು 
ದೇಶ

ಋತುಸ್ರಾವದ ಕುರಿತು ವಿದ್ಯಾರ್ಥಿನಿಯರ ಒಳಒಡುಪು ಪರೀಕ್ಷಿಸಿದ್ದ ಕಾಲೇಜು ಪ್ರಾಂಶುಪಾಲರ ಅಮಾನತು!

ಕಾಲೇಜಿಗೆ ಬರುವ ವಿದ್ಯಾರ್ಥಿನಿಯರ ಋತುಸ್ರಾವದ ಕುರಿತು ಒಳಉಡುಪು ಪರೀಕ್ಷೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

ಅಹ್ಮದಾಬಾದ್: ಕಾಲೇಜಿಗೆ ಬರುವ ವಿದ್ಯಾರ್ಥಿನಿಯರ ಋತುಸ್ರಾವದ ಕುರಿತು ಒಳಉಡುಪು ಪರೀಕ್ಷೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ.

ಋತುಸ್ರಾವವಾಗಿಲ್ಲ ಎಂದು ಖಚಿತಪಡಿಸಲು ಸುಮಾರು 60 ವಿದ್ಯಾರ್ಥಿನಿಯರ ಒಳಉಡುಪುಗಳನ್ನು ಶಿಕ್ಷಕರು ಬಲವಂತವಾಗಿ ತೆಗೆಸಿ ಪರೀಕ್ಷೆ ನಡೆಸಿದ್ದ ಅಮಾನವೀಯ ಘಟನೆ ಗುಜರಾತ್‍ ನ ಭುಜ್ ಎಂಬಲ್ಲಿನ ಶ್ರೀ ಸಹಜಾನಂದ ಮಹಿಳಾ ಕಾಲೇಜಿನಲ್ಲಿ ನಡೆದಿತ್ತು. ಕೆಲ ವಿದ್ಯಾರ್ಥಿನಿಯರು ತಮ್ಮ ಮಾಸಿಕ ದಿನಗಳಂದು ಧಾರ್ಮಿಕ ಕಟ್ಟಳೆಗಳನ್ನು ಉಲ್ಲಂಘಿಸುತ್ತಿದ್ದಾರೆಂದು ಹಾಸ್ಟೆಲ್ ಮುಖ್ಯಸ್ಥರು ಪ್ರಾಂಶುಪಾಲರಿಗೆ ದೂರಿದ ನಂತರ ಇಂತಹ ಒಂದು ವಿಪರೀತದ ಕ್ರಮ ಕೈಗೊಳ್ಳಲಾಗಿತ್ತು.

ಈ ಕುರಿತಂತೆ ವಿದ್ಯಾರ್ಥಿನಿಯರ ಪೋಷಕರು ದೂರು ನೀಡಿದ ಬೆನ್ನಲ್ಲೇ ಈ ಸುದ್ದಿ ವ್ಯಾಪಕವಾಗಿ ಹಬ್ಬಿ ಕಾಲೇಜಿನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಕಾಲೇಜಿನ ಪ್ರಾಂಶುಪಾಲರಾದ ರೀಟಾ ರಾಣಿಂಗರನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಕಾಲೇಜು ಆಡಳಿತ ಮಂಡಳಿ ವಿರುದ್ಧ ಐಪಿಸಿ ಸೆಕ್ಷನ್ 384, 355 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT