'ನಮಸ್ತೆ ಟ್ರಂಪ್': ಜಾಗ ಖಾಲಿ ಮಾಡುವಂತೆ ಸ್ಟೇಡಿಯಂ ಬಳಿಯಿದ್ದ 45 ಕುಟುಂಬಗಳಿಗೆ ನೋಟಿಸ್ ಜಾರಿ 
ದೇಶ

'ನಮಸ್ತೆ ಟ್ರಂಪ್': ಜಾಗ ಖಾಲಿ ಮಾಡುವಂತೆ ಸ್ಟೇಡಿಯಂ ಬಳಿಯಿದ್ದ 45 ಸ್ಲಂ ಕುಟುಂಬಗಳಿಗೆ ನೋಟಿಸ್ ಜಾರಿ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಣ್ಣಿಗೆ ಸ್ಲಂಗಳು ಕಾಣದಂತೆ ಅಹಮದಾಬಾದ್ ನಗರಸಭೆ ಗೋಡೆಯನ್ನು ನಿರ್ಮಾಣ ಮಾಡುತ್ತಿರುವುದು ಗೊತ್ತಿರುವ ವಿಚಾರ, ಇದೀಗ ನಮಸ್ತೆ ಟ್ರಂಪ್ ಕಾರ್ಯಕ್ರಮದ ವೇಳೆಯೂ ಟ್ರಂಪ್ ಅವರಿಗೆ ಸ್ಲಂಗಳು ಕಾಣದಂತೆ ಕ್ರಮಕೈಗೊಂಡಿರುವ ಅಲ್ಲಿನ ಸರ್ಕಾರ ಸ್ಟೇಡಿಯಂ ಬಳಿಯಿರುವ 45 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ...

ಅಹಮದಾಬಾದ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಣ್ಣಿಗೆ ಸ್ಲಂಗಳು ಕಾಣದಂತೆ ಅಹಮದಾಬಾದ್ ನಗರಸಭೆ ಗೋಡೆಯನ್ನು ನಿರ್ಮಾಣ ಮಾಡುತ್ತಿರುವುದು ಗೊತ್ತಿರುವ ವಿಚಾರ, ಇದೀಗ ನಮಸ್ತೆ ಟ್ರಂಪ್ ಕಾರ್ಯಕ್ರಮದ ವೇಳೆಯೂ ಟ್ರಂಪ್ ಅವರಿಗೆ ಸ್ಲಂಗಳು ಕಾಣದಂತೆ ಕ್ರಮಕೈಗೊಂಡಿರುವ ಅಲ್ಲಿನ ಸರ್ಕಾರ ಸ್ಟೇಡಿಯಂ ಬಳಿಯಿರುವ 45 ಕುಟುಂಬಗಳಿಗೆ ಜಾಗ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಗಲು ತಿಳಿಸಿವೆ. 

ಸ್ಟೇಡಿಯಂ ಬಳಿಯಿರುವ ಸ್ಲಂನಲ್ಲಿ ಒಟ್ಟು 45 ಕುಟುಂಬಗಳು ವಾಸ ಮಾಡುತ್ತಿದ್ದು, 200 ಮಂದಿ ಈ ಸ್ಲಂಗಳಲ್ಲಿ ಜೀವನ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಇದೀಗ ಟ್ರಂಪ್ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಾಗ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. 

ಡೊನಾಲ್ಡ್ ಟ್ರಂಪ್ ಅವರು 2 ದಿನಗಳ ಕಾಲ ಭಾರತಕ್ಕೆ ಭೇಟಿ ನೀಡುತ್ತಿದ್ದು, ಟ್ರಂಪ್ ಅವರನ್ನು ಆಹ್ವಾನಿಸಲು ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 

ಕೊಳಗೇರಿ ನಿವಾಸಿಗಳು ಪಟ್ಟಣ ಯೋಜನೆ ಭಾಗವಾಗಿರುವ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದ್ದು, ಹೀಗಾಗಿ 7 ದಿನಗಳಲ್ಲಿ ಜಾಗ ಖಾಲಿ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ಮೇಲ್ಮನವಿಗಳಿದ್ದಲ್ಲಿ, ಬುಧವಾರದೊದಳಗಾಗಿ ಪಟ್ಟಣ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. 

ಟ್ರಂಪ್ ಫೆಬ್ರವರಿ 24-25ರಂದು ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಅಹಮದಾಬಾದ್'ಗೆ ಅವರು ಭೇಟಿ ನೀಡಲಿದ್ದು, ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಜೊತೆ ರೋಡ್ ಶೋ ನಡೆಸಲಿದ್ದಾರೆ. ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದು, ನಂತರ ಮೊಟೆರಾದ ನೂತನ ಬೃಹತ್ ಕ್ರೀಡಾಂಗಣ ಉದ್ಘಾಟಿಸಿ, ಭಾಷಣ ಮಾಡಲಿದ್ದಾರೆ. 

ರೋಡ್ ಶೋ ವೇಳೆ ಸ್ಲಂ ಕಾಣದಂತೆ ಸುಮಾರು ಅರ್ಧ ಕಿಲೋಮೀಟರ ಉದ್ದದ ಗೋಡೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಗಾಂಧಿನಗರ ಮತ್ತು ಅಹಮದಾಬಾದ್ ನಡುವಿನ ಮಾರ್ಗವನ್ನು ಸುಂದರಗೊಳಿಸಲು ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ದೇವ್ ಸರನ್ ಎಂದು ಕರೆಯಲಾಗುವ ಸ್ಲಂನಲ್ಲಿ ಸುಮಾರು 500 ಮನೆಗಳಿದ್ದು, 2, 500 ಜನರು ದಶಕಗಳಿಂದ ವಾಸವಾಗಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT