ಸಂಗ್ರಹ ಚಿತ್ರ 
ದೇಶ

ಮುಸ್ಲಿಮರ ಸಮಾಧಿಗಳ ಮೇಲೆ ರಾಮ ಮಂದಿರವೇ..? ಟ್ರಸ್ಟ್‌ಗೆ ಮುಸ್ಲಿಮರ ಪತ್ರ!

ರಾಮಮಂದಿರ ನಿರ್ಮಿಸಲು ಹಂಚಿಕೆ ಮಾಡಿರುವ ಭೂಮಿಯಲ್ಲಿ ಗೋರಿಗಳಿವೆ ಎಂದು ಕೆಲ ಅಯೋಧ್ಯ ಮುಸ್ಲಿಮರು ದೇಗುಲ ನಿರ್ಮಾಣ ಸಂಬಂಧ ರಚಿಸಲಾಗಿರುವ ಟ್ರಸ್ಟ್‌ಗೆ ಪತ್ರ ಬರೆದಿದ್ದಾರೆ.

ಅಯೋಧ್ಯ: ರಾಮಮಂದಿರ ನಿರ್ಮಿಸಲು ಹಂಚಿಕೆ ಮಾಡಿರುವ ಭೂಮಿಯಲ್ಲಿ ಗೋರಿಗಳಿವೆ ಎಂದು ಕೆಲ ಅಯೋಧ್ಯ ಮುಸ್ಲಿಮರು ದೇಗುಲ ನಿರ್ಮಾಣ ಸಂಬಂಧ ರಚಿಸಲಾಗಿರುವ ಟ್ರಸ್ಟ್‌ಗೆ ಪತ್ರ ಬರೆದಿದ್ದಾರೆ.

ಗೋರಿಗಳ ಮೇಲೆ ದೇವಾಲಯ ನಿರ್ಮಿಸಿದರೆ “ಸನಾತನ ಧರ್ಮ” ಉಲ್ಲಂಘನೆಯಾಗುವುದಿಲ್ಲವೇ..? ಮುಸ್ಲಿಮರ ಸಮಾಧಿಗಳ ಮೇಲೆ ಹೇಗೆ ರಾಮಮಂದಿರ ನಿರ್ಮಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮುಸ್ಲಿಮರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಂ ಆರ್ ಶಂಷದ್ ದೇವಾಲಯ ಟ್ರಸ್ಟ್ ನಾಯಕತ್ವ ವಹಿಸಿರುವ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಕೆ.ಕೆ. ಪರಾಶರನ್ ಅವರಿಗೆ ಈ ಪತ್ರ ರವಾನಿಸಿದ್ದಾರೆ.

ಬಾಬ್ರಿ ಮಸೀದಿ ನೆಲಸಮವಾದ ಸ್ಥಳದ ಸುತ್ತ ಸ್ಮಶಾನವಿದೆ ... 1885ರ ಗಲಭೆಯಲ್ಲಿ ಮೃತಪಟ್ಟ 75 ಮುಸ್ಲಿಮರನ್ನು ಅಲ್ಲಿಯೇ ಸಮಾಧಿ ಮಾಡಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ದಾಖಲೆಗಳ ಪ್ರಕಾರ, ಮೃತ ಮುಸ್ಲಿಮರ ಎಲ್ಲಾ ಗೋರಿಗಳು ಈಗಿನ ಮಸೀದಿಯ ಸುತ್ತಮುತ್ತಲ ಪ್ರದೇಶಗಳಲ್ಲಿವೆ. ಈ ಸ್ಥಳವನ್ನು ಸಮಾಧಿಗಾಗಿ ಬಳಸಲಾಗುತ್ತಿತ್ತು ಎಂದು ಸ್ಥಳೀಯ ಮುಸ್ಲಿಮರು ಹೇಳುತ್ತಿದ್ದಾರೆ. ಮುಸ್ಲಿಮರ ಸಮಾಧಿಯ ಮೇಲೆ ರಾಮ ಮಂದಿರ ನಿರ್ಮಿಸುವುದು ಸ್ವೀಕಾರಾರ್ಹವೇ ಎಂದು ಪರಿಗಣಿಸುವಂತೆ ಪತ್ರದಲ್ಲಿ ಕೋರಲಾಗಿದೆ. 67 ಎಕರೆಗಳ ಭೂಮಿ ವಿಷಯದಲ್ಲಿ ಸರ್ಕಾರ ಮುಸ್ಲಿಮರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ವಕೀಲ ಶಂಷದ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT