ಸಂಗ್ರಹ ಚಿತ್ರ 
ದೇಶ

ವಿಡಿಯೋ: ಅನಾರೋಗ್ಯ ಪೀಡಿತ ಅಮರ್ ಸಿಂಗ್ ಬಿಗ್ ಬಿ ಬಚ್ಚನ್ ಕುಟುಂಬದ ಕುರಿತು ಹೇಳಿದ್ದೇನು ಗೊತ್ತಾ?

ಈ ಹಿಂದೆ ಅಮಿತಾಬ್ ಬಚ್ಚನ್ ಮತ್ತು ಪತ್ನಿ ಜಯಾ ಬಚ್ಚನ್ ವಿರುದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದ ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭೆಯ ಸದಸ್ಯ ಅಮರ್ ಸಿಂಗ್ ಇದೀಗ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬಿಗ್ ಬಿ ಬಚ್ಚನ್ ಕುಟುಂಬದ ಭಾವುಕರಾಗಿ ಮಾತನಾಡಿದ್ದಾರೆ.

ಮುಂಬೈ: ಈ ಹಿಂದೆ ಅಮಿತಾಬ್ ಬಚ್ಚನ್ ಮತ್ತು ಪತ್ನಿ ಜಯಾ ಬಚ್ಚನ್ ವಿರುದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದ ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭೆಯ ಸದಸ್ಯ ಅಮರ್ ಸಿಂಗ್ ಇದೀಗ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬಿಗ್ ಬಿ ಬಚ್ಚನ್ ಕುಟುಂಬದ ಭಾವುಕರಾಗಿ ಮಾತನಾಡಿದ್ದಾರೆ.

ಅಮರ್‌ ಸಿಂಗ್‌ ಅವರು ಕಿಡ್ನಿ ವೈಫಲ್ಯ ಸೇರಿದಂತ ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅವರು, ಹಿಂದೊಮ್ಮೆ ಅಮಿತಾಬ್‌ ಬಚ್ಚನ್‌ ಅವರ ವಿರುದ್ಧ ಆಡಿದ್ದ ವಿವಾದಾತ್ಮಕ ಮಾತುಗಳಿಗೆ ಸದ್ಯ ಕ್ಷಮೆ ಕೋರಿದ್ದಾರೆ.  ಈ ಕುರಿತು ಟ್ವೀಟ್‌ ಮಾಡಿರುವ ಅಮರ್‌ ಸಿಂಗ್‌, 'ಇಂದು ನನ್ನ ತಂದೆಯ ಪುಣ್ಯತಿಥಿ. ಇದೇ ವಿಚಾರವಾಗಿ ಇಂದು ಅಮಿತಾಬ್‌ ಬಚ್ಚನ್‌ ಅವರು ನನಗೆ ಸಂದೇಶ ಕಳುಹಿಸಿದ್ದರು. ಅಮಿತಾಬ್‌ ಬಚ್ಚನ್‌ ಮತ್ತು ಅವರ ಕುಟುಂಬದ ವಿರುದ್ಧ ಹಿಂದೊಮ್ಮೆ ನೀಡಿದ್ದ ಅತಿರೇಕದ ಹೇಳಿಕೆಗಳಿಗೆ ಸದ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ನಾನು ಈಗ ವಿಷಾದ ವ್ಯಕ್ತಪಡಿಸುತ್ತೇನೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಅಮರ್ ಸಿಂಗ್ ಟ್ವೀಟ್ ನಲ್ಲಿ ಹೇಳಿದ್ದಾರೆ.

2013ರಲ್ಲೇ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿದ್ದ ಅಮರ್‌ ಸಿಂಗ್‌ ಅವರ ಆರೋಗ್ಯ ಪರಿಸ್ಥಿತಿ ಸದ್ಯ ತೀವ್ರ ಹದಗೆಟ್ಟಿದೆ. ಕೃಷಕಾಯರಾಗಿರುವ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಒಂದು ಕಾಲಕ್ಕೆ ಅಮಿತಾಬ್‌ ಬಚ್ಚನ್‌ ಕುಟುಂಬಕ್ಕೆ ಅತ್ಯಾಪ್ತರಾಗಿದ್ದ ಅಮರ್‌ ಸಿಂಗ್‌ ನಂತರದ ದಿನಗಳಲ್ಲಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಚ್ಚನ್‌ ಕುಟುಂಬ ಸದಸ್ಯರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಪ್ರಮುಖವಾಗಿ 2019ರ ಜುಲೈನಲ್ಲಿ 'ಬೂಟಾಟಿಕೆ ನಿಲ್ಲಿಸಿ ಜಯಾ ಬಚ್ಚನ್‌ ಅವರೇ' ಎಂಬ ಶೀರ್ಷಿಕೆಯೊಂದಿಗೆ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದ ಅಮರ್‌ ಸಿಂಗ್‌, ಅಮಿತಾಬ್‌ ಬಚ್ಚನ್‌ ಮತ್ತು ಐಶ್ವರ್ಯಾ ರೈ ಬಚ್ಚನ್‌ ಅವರು ಸಿನಿಮಾದಲ್ಲಿ ಅಸಭ್ಯ ಪಾತ್ರಗಳನ್ನು ಮಾಡಿದ್ದಾರೆ ಎಂದು ಟೀಕಿಸಿದ್ದರು. ಧೂಮ್‌ ಚಿತ್ರದ ಹಾಡೊಂದರಲ್ಲಿ ರಿಮಿ ಸೆನ್‌ ಅವರೊಂದಿಗೆ ಅಭಿನಯಿಸಿದ್ದ ಅಭಿಷೇಕ್‌ ಬಚ್ಚನ್‌ ಅವರ ಕುರಿತೂ ಈ ವಿಡಿಯೊದಲ್ಲಿ ಅವರು ಟೀಕೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT