ಶಶಿ ತರೂರ್ 
ದೇಶ

ಕಾಂಗ್ರೆಸ್‌ನಲ್ಲಿ ನಾಯಕತ್ವದ ಬದಲಾವಣೆ ವಿಚಾರ  ಸಂದೀಪ್ ದೀಕ್ಷಿತ್ ಬೆನ್ನಿಗೆ ನಿಂತ ಶಶಿ ತರೂರ್

ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಜವಾಬ್ದಾರಿಯುತ ಸ್ಥಾನಗಳಿದೆ. ಕಾರ್ಯಕರ್ತರನ್ನು ಹುರಿದುಂಬಿಸಲು, ಮತದಾರರನ್ನು ಸೆಳೆಯಲು ಅವೆಲ್ಲಾ ಭರ್ತಿಯಾಗಬೇಕು.ಈ ನಿಟ್ಟಿನಲ್ಲಿ ನಾನು ಸಂದೀಪ್ ದೀಕ್ಷಿತ್ ಅವರ ಮಾತುಗಳಿಗೆ ಸಮ್ಮತಿಸುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ತಿರುವನಂತಪುರಂ ಸಂಸದರಾದ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುತ್ತಿರುವ ಭಿನ್ನಮತದ ದನಿಗ

ತಿರುವನಂತಪುರಂ: ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಜವಾಬ್ದಾರಿಯುತ ಸ್ಥಾನಗಳಿದೆ. ಕಾರ್ಯಕರ್ತರನ್ನು ಹುರಿದುಂಬಿಸಲು, ಮತದಾರರನ್ನು ಸೆಳೆಯಲು ಅವೆಲ್ಲಾ ಭರ್ತಿಯಾಗಬೇಕು.ಈ ನಿಟ್ಟಿನಲ್ಲಿ ನಾನು ಸಂದೀಪ್ ದೀಕ್ಷಿತ್ ಅವರ ಮಾತುಗಳಿಗೆ ಸಮ್ಮತಿಸುತ್ತೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ತಿರುವನಂತಪುರಂ ಸಂಸದರಾದ ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುತ್ತಿರುವ ಭಿನ್ನಮತದ ದನಿಗಳ ನಡುವೆ ತರೂರ್ ಸಂದೀಪ್ ದೀಕ್ಷಿತ್ ಬೆನ್ನಿಗೆ ನಿಂತಿರುವುದು ಹಿರಿಯ ಮುಖಂಡರಿಗೆ ತಲೆನೋವಾಗಿದೆ.

ದೆಹಲಿ ಚುನಾವಣೆಯಲ್ಲಿ ಎರಡನೇ ಬಾರಿಗೆ ಪಕ್ಷವು ಶೂನ್ಯ ಸಾಧನೆ ಮಾಡಿದ ಬಳಿಕ ದೆಹಲಿಯ ಮಾಜಿ ಸಿಎಂ ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್ "ಕೈ ಪಕ್ಷ ಹೊಸ ನಾಯಕತ್ವವನ್ನು ಹುಡುಕುವಲ್ಲಿ ವಿಫಲವಾಗಿದೆ. " ಏಂದು ಬಹಿರಂಗವಾಗಿ ಟೀಕಿಸಿದ್ದರು. ಅಲ್ಲದೆ ಪಕ್ಷದಲ್ಲಿ ನಾಯಕತ್ವ ವಹಿಸಬಲ್ಲ ಕನಿಷ್ಟ  "ಆರು-ಎಂಟು" ನಾಯಕರು  ಇದ್ದಾರೆ ಎಂದಿಊ ಹೇಳಿದ್ದರು.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದ ನಂತರ ದೆಹಲಿ ಚುನಾವಣಾ ಉಸ್ತುವಾರಿ ಪಿಸಿ ಚಾಕೊ ಈ ಪ್ರದೇಶದಲ್ಲಿ ಪಕ್ಷದ ಸೋಲಿಗೆ ಮಾಜಿ ಸಿಎಂ ಶೀಲಾ ದೀಕ್ಷಿತ್ ಕಾರಣವೆಂದು ದೂರಿದ್ದರು.

ಇದೀಗ ಸಂದೀಪ್ ಟೀಕೆಯ ಕುರಿತು ಪ್ರತಿಕ್ರಯಿಸಿರುವ ತರೂರ್ “ಸಂದೀಪ್ ದೀಕ್ಷಿತ್ ಬಹಿರಂಗವಾಗಿ ಹೇಳಿದ್ದು, ದೇಶಾದ್ಯಂತದ ಡಜನ್ನುಗಟ್ಟಲೆ  ಪಕ್ಷದ ನಾಯಕರು ಖಾಸಗಿಯಾಗಿ ಹೇಳುತ್ತಿದ್ದ ವಿಚಾರವೇ ಆಗಿದೆ" ಎಂದಿದ್ದಾರೆ., “ಸಂದೀಪ್ ದೀಕ್ಷಿತ್ ಬಹಿರಂಗವಾಗಿ ಹೇಳಿದ್ದು, ದೇಶಾದ್ಯಂತದ ಡಜನ್ನುಗಟ್ಟಲೆ  ಪಕ್ಷದ ನಾಯಕರು ಖಾಸಗಿಯಾಗಿ ಹೇಳುತ್ತಿದ್ದ ವಿಚಾರವೇ ಹೌದು. ಕ್ಷದಲ್ಲಿ ಅನೇಕ ಜವಾಬ್ದಾರಿಯುತ ಸ್ಥಾನಗಳಿದೆ. ಕಾರ್ಯಕರ್ತರನ್ನು ಹುರಿದುಂಬಿಸಲು, ಮತದಾರರನ್ನು ಪ್ರೇರೇಪಿಸಲು ನಾಯಕತ್ವಕ್ಕಾಗಿ ಮತದಾನ ನಡೆಸಲು ಸಿಡಬ್ಲ್ಯೂಸಿನಾನು ಮತ್ತೆ ಮನವಿ ಸಲ್ಲಿಸುತ್ತೇನೆ" ತರೂರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT